Homeಕರ್ನಾಟಕದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

ರಾಜ್ಯದ ಜನತೆ ಭಾರತ್‌ ಜೋಡೋ ಯಾತ್ರೆಗೆ ಬೆಂಬಲಿಸಬೇಕು ಎಂದು ಅವರು ವಿನಂತಿಸಿದ್ದಾರೆ

- Advertisement -
- Advertisement -

ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ ಭಾರತ್‌ ಜೋಡೋ ಯಾತ್ರೆಯನ್ನು ಬೆಂಬಲಿಸಬೇಕು’ ಎಂಬ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

“ನನ್ನಂಥವರು ಬಹಳ ಭರವಸೆಯಿಂದ ಕರ್ನಾಟಕಕ್ಕೆ ಬರುತ್ತೇವೆ. ಭಾರತ್‌ ಜೋಡೋ ಯಾತ್ರೆಯನ್ನು ನಾನು ಭಾರತದ ‘ದಕ್ಷಿಣಾಯಣ ಮೂಮೆಂಟ್‌’ ಎಂದು ಕರೆಯುತ್ತೇನೆ. ಕರ್ನಾಟಕ ಸಾಂಸ್ಕೃತಿಕವಾಗಿ ಬಹಳ ಸಂಪದ್ಭರಿತ ನಾಡು. ಗಿರೀಶ್‌ ಕಾರ್ನಾಡ್‌, ಅನಂತಮೂರ್ತಿ ಮುಂತಾದವರ ಬರಹಗಳನ್ನು ಓದಿ ಬೆಳೆದಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದಂತೆ ಕುವೆಂಪು ಅವರ ಕವಿತೆಗಳು ಪ್ರಭಾವಿಸಿವೆ” ಎಂದು ಅವರು ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರ್ನಾಟಕದ ದಲಿತ ಸಾಹಿತ್ಯದ ಆಳವನ್ನು ಅರಿತಿದ್ದೇವೆ. ಬರಹಗಾರರಾದ ಗೆಳೆಯ ಡಿ.ಆರ್‌. ನಾಗರಾಜ್‌, ದೇವನೂರು ಮಹಾದೇವ ಇವರೆಲ್ಲ ಮಾರ್ಗದರ್ಶಕರು. ಇವರಿಂದ ಇಡೀ ದೇಶ ಕಲಿಯುವುದು ಬಹಳ ಇದೆ. ಇದು ದಕ್ಷಿಣದ ಯೋಚನೆಯೊಂದಿಗೆ ಉತ್ತರಕ್ಕೆ ಪ್ರಯಾಣ. ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಜನ ಚಳವಳಿ, ಸಂಘಟನೆಗಳು ಭಾಗವಹಿಸುವುದು ಬಹಳ ಮುಖ್ಯ. ಯಾರೆಲ್ಲ ಇನ್ನೂ ಸೇರಿಕೊಂಡಿಲ್ಲವೋ ತಕ್ಷಣ ಸೇರಿಕೊಳ್ಳಿ” ಎಂದು ಯೋಗೇಂದ್ರ ಯಾದವ್‌ ಕರೆ ನೀಡಿದರು.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

“ಕಾಂಗ್ರೆಸ್‌ನ ಅಭಿಯಾನವಾದ ‘ಭಾರತ್‌ ಜೋಡೋ’ ಪಾದಯಾತ್ರೆ ಇಂದಿನ ಅಗತ್ಯವಾಗಿದೆ. ಬಾಬಾ ಸಾಹೇಬರ ಸಂವಿಧಾನ ಅಪಾಯದಲ್ಲಿದೆ. ನಾಗರಿಕತೆಯ ಅಡಿಪಾಯದ ಮೇಲೆ ದಾಳಿ ನಡೆಯುತ್ತಿದೆ. ಇಂತಹ ಸಂದಿಗ್ಧ ಸಮಯದಲ್ಲಿ ನಾವೆಲ್ಲರೂ ಬೀದಿಯಲ್ಲಿ ನಿಂತು ನಮ್ಮ ಅಸ್ತಿತ್ವವನ್ನು ತೋರಿಸಬೇಕಿದೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 30ರಂದು ಗುಂಡ್ಲುಪೇಟೆಯ ಮೂಲಕ ಕರ್ನಾಟಕ ಪ್ರವೇಶಿಸುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ‘ಭಾವೈಕ್ಯ ಕರ್ನಾಟಕ ಬ್ಯಾನರ್‌ನಡಿ’ ಎಲ್ಲ ಸಮಾನ ಮನಸ್ಕರು, ದೇಶಪ್ರೇಮಿಗಳು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

“ನಮ್ಮ ಮನೆಗೆ ಬೆಂಕಿ ಬಿದ್ದಿದೆ. ನಮಗೆ ಕಾಣುತ್ತಿರುವುದು ಇಬ್ಬರಷ್ಟೇ. ಒಬ್ಬನ ಕೈಯಲ್ಲಿ ಪೆಟ್ರೋಲ್‌ ಬಾಟಲಿಯಿದೆ. ಮತ್ತೊಬ್ಬ ನೀರಿನ ಬಕೆಟ್‌ ಹಿಡಿದು ನಿಂತಿದ್ದಾನೆ. ನೀರಿನ ಬಕೆಟ್‌ ಯಾರೇ ಹಿಡಿದು ಬರಲಿ ಆತ ನಮಗೆ ಗೆಳೆಯನಂತೆ ಕಾಣುತ್ತಾನೆ. ದ್ವೇಷದ ರಾಜಕಾರಣ ತಿರಸ್ಕರಿಸಲು, ಸದುದ್ದೇಶದಿಂದ ಕೂಡಿದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಗೆ ಎಲ್ಲರೂ ಬೆಂಬಲ ನೀಡಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

“ಕೇವಲ ಎರಡೂವರೆ ವರ್ಷದಲ್ಲಿ ಅದಾನಿಯ ಸಂಪತ್ತು 66 ಸಾವಿರ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಅದನ್ನು ಮರೆಮಾಚಲು ಬಿಜೆಪಿ ಮತ್ತು ಸಂಘಪರಿವಾರ ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರುತ್ತಿದೆ” ಎಂದು ಅವರು ಆರೋಪಿಸಿದರು.

“ಕರ್ನಾಟಕ ದ್ವೇಷ ರಾಜಕಾರಣದ ಪ್ರಯೋಗಶಾಲೆಯಾಗಿದೆ. ಇದುವರೆಗೆ ಕಂಡು ಕೇಳರಿಯದಂಥ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಮುಳುಗಿದೆ. ನಾವು ದುರಾಡಳಿತದ ಬಗ್ಗೆ ಪ್ರಶ್ನೆ ಮಾತನಾಡಿದರೆ, ಅವರು ಹಿಜಾಬ್‌ ವಿಷಯ ಮುನ್ನೆಲೆಗೆ ತರುತ್ತಾರೆ. ದೇಶದಲ್ಲಿ ಕಳೆದ 40 ವರ್ಷಗಳಲ್ಲೇ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶವನ್ನು ಉಳಿಸಲು ಎಲ್ಲ ಸಂಘಟನೆಗಳು, ಜನಚಳವಳಿಗಳು, ಸಾಮಾಜಿಕ ಕಾರ್ಯಕರ್ತರು ಒಂದಾಗಬೇಕು” ಎಂದು ಅವರು ಸಲಹೆ ನೀಡಿದರು.

ಹಿರಿಯ ಸಾಹಿತಿ ಬಂಜಗೆರೆ ಜಯಪ್ರಕಾಶ್‌ ಮಾತನಾಡಿ, “ಸಮಾಜದಲ್ಲಿ ಪಂಗಡೀಕರಣ ಮತ್ತು ವಿಂಗಡೀಕರಣ ಆಗುತ್ತಿರುವುದು ಬಹಳ ದೊಡ್ಡ ವಿದ್ಯಮಾನ. ಕರ್ನಾಟಕದ ಇತಿಹಾಸ ಸಾಮರಸ್ಯಕ್ಕೆ ಮಾದರಿಯಾಗಿತ್ತು. ಈಗ ಯಾರಿಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿಲ್ಲ. ಮಾನವಹಕ್ಕು ಹೋರಾಟಗಾರರು, ಸಾಹಿತಿಗಳಿಗೆ ಅಪಾಯ ಬಂದೊದಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲ ಇದರ ವಿರುದ್ಧ ಒಂದಾಗಲು ಭಾರತ್‌ ಜೋಡೋಗೆ ಕೈಜೋಡಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

“ಬಹುತ್ವ ಭಾರತ, ಒಕ್ಕೂಟ ಭಾರತ, ಸಮಾನತೆ ಮತ್ತು ಶಿಕ್ಷಣಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಭಾರತ್‌ ಜೋಡೋವನ್ನು ಬೆಂಬಲಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ದೇಶದ ಬಗ್ಗೆ ಕಾಳಜಿ ಇರುವವರು, ಪ್ರಜಾಪ್ರಭುತ್ವ ಉಳಿಸಬೇಕೆಂದು ಬಯಸುವ ಎಲ್ಲರೂ ಸೇರಿ ಕರ್ನಾಟಕದಲ್ಲಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನಿ ಪ್ರಕಾಶ್‌ ಕಮ್ಮರಡಿ ವಿನಂತಿಸಿದರು. “ಭಾರತ್‌ ಜೋಡೋ ಬೆಂಬಲಿಸಿದ ಮಾತ್ರಕ್ಕೆ ನಾವು ಕಾಂಗ್ರೆಸ್‌ ಪರ ಎಂದಲ್ಲ. ಕಾಂಗ್ರೆಸ್‌ನ ನೀತಿಗಳನ್ನೂ ವಿರೋಧಿಸುತ್ತೇವೆ. ಸದ್ಯ ವಿರೋಧಿಸುವ, ಟೀಕಿಸುವ ಸ್ವಾತಂತ್ರ್ಯ ಉಳಿಸುವ ಅಗತ್ಯವಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ, ಚಿಂತಕಿ ಬಿ.ಟಿ. ಲಲಿತಾ ನಾಯಕ್‌ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...