Homeಕರ್ನಾಟಕರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

- Advertisement -
- Advertisement -

ಬೆವರು ಹಾಗೂ ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ರಾಜ್ಯದಲ್ಲಿ ಲಕ್ಷಾಂತರ ಸ೦ಖ್ಯೆಯಲ್ಲಿರುವ ವಲಸಿಗ ಕಾರ್ಮಿಕರು ಸ್ವ೦ತ ಊರುಗಳಿಗೆ ಹೋಗಲು ಪರದಾಡುತ್ತಿರುವ ದೃಶ್ಯವನ್ನು ನಿತ್ಯ ನೋಡುತ್ತಿದ್ದೇವೆ. ಅದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರೂ ಇಲ್ಲಿಗೆ ಬರಲು ಕಷ್ಟಪಡುತ್ತಿದ್ದಾರೆ. ಸ್ವಂತ ಊರುಗಳನ್ನು ತಲುಪಲು ಸರ್ಕಾರ ಎಲ್ಲ ಕಾರ್ಮಿಕರಿಗೆ ಕೂಡಲೇ ವ್ಯವಸ್ಥೆ ಮಾಡಬೇಕು” ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಬೆ೦ಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲಾಕ್‌ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲ ಎಂದಿರುವ ಅವರು, “ಊರುಗಳಿಗೆ ಹೋಗಲು ಆಗದೆ, ಅನ್ನ, ಆಹಾರ ಇಲ್ಲದೆ ಅವರು ಹೆಣಗಾಡುತ್ತಾ, ನಡೆದು ಹೋಗುವ ಮಾರ್ಗದಲ್ಲಿ ನಡೆದು ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆ ಹಸಿವಿನಿ೦ದ ಸತ್ತಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿದೆ” ಎಂದು ಹೇಳಿದ್ದಾರೆ.

ಸಿದ್ದಾರಾಮಯ್ಯ ಪತ್ರದಲ್ಲಿ “ಇಷ್ಟೆಲ್ಲವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನಸ್ಸು ಕರಗಿದ೦ತೆ ಕಾಣುತ್ತಿಲ್ಲ. ಕೂಡಲೇ ರಾಜ್ಯದಲ್ಲಿರುವ, ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ರೈಲು ವ್ಯವಸ್ಥೆ ಮಾಡಬೇಕು. ಪ್ರಯಾಣ ವೆಚ್ಚದಲ್ಲಿ ಶೇ. 85 ರಷ್ಟನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು.” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗುವಂತೆ ಸೂಚಿಸಲಾಗುತ್ತಿದೆ. ಆದರೆ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್‌ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ರಾಜ್ಯದಿ೦ದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್‌ರೋಲ್‌ ಮಾಡಿಸಲು ಪಾಲಿಕೆಯ ವಾರ್ಡ್‌ ಕಚೇರಿ, ಪೊಲೀಸ್‌ ಠಾಣೆಗಳಲ್ಲಿ ಕೌಂಟರ್‌ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ” ಎಂದು ಹೇಳಿದ್ದಾರೆ.

“ಈ ಎಲ್ಲವನ್ನೂ ಸಾಧ್ಯವಾಗಿಸಲು ಉಸ್ತುವಾರಿಗಳು, ಯಂತ್ರಾ೦ಗ ಮತ್ತು ಮಾರ್ಗಸೂಚಿಯನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಬೇಕು. ಇನ್ನು ಮುಂದೆ ಒಬ್ಬ ಕಾರ್ಮಿಕನೂ ಸಾವು ನೋವಿಗೆ ತುತ್ತಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಬೆವರು, ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು” ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬಗ್ಗೆ ಸಿದ್ದರಾಮಯ್ಯನವರಿಗೆ ಇರುವಶ್ಟು ಕಾಳಜಿ ಆಡಳಿತಾರೂಢರಿಗೆ ಇಲ್ಲ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...