Homeಕರ್ನಾಟಕರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

- Advertisement -
- Advertisement -

ಬೆವರು ಹಾಗೂ ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ರಾಜ್ಯದಲ್ಲಿ ಲಕ್ಷಾಂತರ ಸ೦ಖ್ಯೆಯಲ್ಲಿರುವ ವಲಸಿಗ ಕಾರ್ಮಿಕರು ಸ್ವ೦ತ ಊರುಗಳಿಗೆ ಹೋಗಲು ಪರದಾಡುತ್ತಿರುವ ದೃಶ್ಯವನ್ನು ನಿತ್ಯ ನೋಡುತ್ತಿದ್ದೇವೆ. ಅದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರೂ ಇಲ್ಲಿಗೆ ಬರಲು ಕಷ್ಟಪಡುತ್ತಿದ್ದಾರೆ. ಸ್ವಂತ ಊರುಗಳನ್ನು ತಲುಪಲು ಸರ್ಕಾರ ಎಲ್ಲ ಕಾರ್ಮಿಕರಿಗೆ ಕೂಡಲೇ ವ್ಯವಸ್ಥೆ ಮಾಡಬೇಕು” ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಬೆ೦ಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲಾಕ್‌ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲ ಎಂದಿರುವ ಅವರು, “ಊರುಗಳಿಗೆ ಹೋಗಲು ಆಗದೆ, ಅನ್ನ, ಆಹಾರ ಇಲ್ಲದೆ ಅವರು ಹೆಣಗಾಡುತ್ತಾ, ನಡೆದು ಹೋಗುವ ಮಾರ್ಗದಲ್ಲಿ ನಡೆದು ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆ ಹಸಿವಿನಿ೦ದ ಸತ್ತಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿದೆ” ಎಂದು ಹೇಳಿದ್ದಾರೆ.

ಸಿದ್ದಾರಾಮಯ್ಯ ಪತ್ರದಲ್ಲಿ “ಇಷ್ಟೆಲ್ಲವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನಸ್ಸು ಕರಗಿದ೦ತೆ ಕಾಣುತ್ತಿಲ್ಲ. ಕೂಡಲೇ ರಾಜ್ಯದಲ್ಲಿರುವ, ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ರೈಲು ವ್ಯವಸ್ಥೆ ಮಾಡಬೇಕು. ಪ್ರಯಾಣ ವೆಚ್ಚದಲ್ಲಿ ಶೇ. 85 ರಷ್ಟನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು.” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗುವಂತೆ ಸೂಚಿಸಲಾಗುತ್ತಿದೆ. ಆದರೆ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್‌ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ರಾಜ್ಯದಿ೦ದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್‌ರೋಲ್‌ ಮಾಡಿಸಲು ಪಾಲಿಕೆಯ ವಾರ್ಡ್‌ ಕಚೇರಿ, ಪೊಲೀಸ್‌ ಠಾಣೆಗಳಲ್ಲಿ ಕೌಂಟರ್‌ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ” ಎಂದು ಹೇಳಿದ್ದಾರೆ.

“ಈ ಎಲ್ಲವನ್ನೂ ಸಾಧ್ಯವಾಗಿಸಲು ಉಸ್ತುವಾರಿಗಳು, ಯಂತ್ರಾ೦ಗ ಮತ್ತು ಮಾರ್ಗಸೂಚಿಯನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಬೇಕು. ಇನ್ನು ಮುಂದೆ ಒಬ್ಬ ಕಾರ್ಮಿಕನೂ ಸಾವು ನೋವಿಗೆ ತುತ್ತಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಬೆವರು, ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು” ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬಗ್ಗೆ ಸಿದ್ದರಾಮಯ್ಯನವರಿಗೆ ಇರುವಶ್ಟು ಕಾಳಜಿ ಆಡಳಿತಾರೂಢರಿಗೆ ಇಲ್ಲ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...