Homeಕರ್ನಾಟಕರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ

ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

- Advertisement -
- Advertisement -

ಬೆವರು ಹಾಗೂ ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ರಾಜ್ಯದಲ್ಲಿ ಲಕ್ಷಾಂತರ ಸ೦ಖ್ಯೆಯಲ್ಲಿರುವ ವಲಸಿಗ ಕಾರ್ಮಿಕರು ಸ್ವ೦ತ ಊರುಗಳಿಗೆ ಹೋಗಲು ಪರದಾಡುತ್ತಿರುವ ದೃಶ್ಯವನ್ನು ನಿತ್ಯ ನೋಡುತ್ತಿದ್ದೇವೆ. ಅದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರೂ ಇಲ್ಲಿಗೆ ಬರಲು ಕಷ್ಟಪಡುತ್ತಿದ್ದಾರೆ. ಸ್ವಂತ ಊರುಗಳನ್ನು ತಲುಪಲು ಸರ್ಕಾರ ಎಲ್ಲ ಕಾರ್ಮಿಕರಿಗೆ ಕೂಡಲೇ ವ್ಯವಸ್ಥೆ ಮಾಡಬೇಕು” ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಬೆ೦ಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲಾಕ್‌ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲ ಎಂದಿರುವ ಅವರು, “ಊರುಗಳಿಗೆ ಹೋಗಲು ಆಗದೆ, ಅನ್ನ, ಆಹಾರ ಇಲ್ಲದೆ ಅವರು ಹೆಣಗಾಡುತ್ತಾ, ನಡೆದು ಹೋಗುವ ಮಾರ್ಗದಲ್ಲಿ ನಡೆದು ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆ ಹಸಿವಿನಿ೦ದ ಸತ್ತಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿದೆ” ಎಂದು ಹೇಳಿದ್ದಾರೆ.

ಸಿದ್ದಾರಾಮಯ್ಯ ಪತ್ರದಲ್ಲಿ “ಇಷ್ಟೆಲ್ಲವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನಸ್ಸು ಕರಗಿದ೦ತೆ ಕಾಣುತ್ತಿಲ್ಲ. ಕೂಡಲೇ ರಾಜ್ಯದಲ್ಲಿರುವ, ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ರೈಲು ವ್ಯವಸ್ಥೆ ಮಾಡಬೇಕು. ಪ್ರಯಾಣ ವೆಚ್ಚದಲ್ಲಿ ಶೇ. 85 ರಷ್ಟನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು.” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗುವಂತೆ ಸೂಚಿಸಲಾಗುತ್ತಿದೆ. ಆದರೆ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್‌ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ರಾಜ್ಯದಿ೦ದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್‌ರೋಲ್‌ ಮಾಡಿಸಲು ಪಾಲಿಕೆಯ ವಾರ್ಡ್‌ ಕಚೇರಿ, ಪೊಲೀಸ್‌ ಠಾಣೆಗಳಲ್ಲಿ ಕೌಂಟರ್‌ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ” ಎಂದು ಹೇಳಿದ್ದಾರೆ.

“ಈ ಎಲ್ಲವನ್ನೂ ಸಾಧ್ಯವಾಗಿಸಲು ಉಸ್ತುವಾರಿಗಳು, ಯಂತ್ರಾ೦ಗ ಮತ್ತು ಮಾರ್ಗಸೂಚಿಯನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಬೇಕು. ಇನ್ನು ಮುಂದೆ ಒಬ್ಬ ಕಾರ್ಮಿಕನೂ ಸಾವು ನೋವಿಗೆ ತುತ್ತಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಬೆವರು, ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಹಾಗೂ ಮಾನವೀಯತೆಯಿಂದ ನಿಭಾಯಿಸಬೇಕು” ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬಗ್ಗೆ ಸಿದ್ದರಾಮಯ್ಯನವರಿಗೆ ಇರುವಶ್ಟು ಕಾಳಜಿ ಆಡಳಿತಾರೂಢರಿಗೆ ಇಲ್ಲ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...