Homeಮುಖಪುಟಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ...

ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ!

- Advertisement -
- Advertisement -

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಒಂದೇ ದರ ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಅವರಿಗೆ ನೆರವಾಗಲು ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ಹೌದು ಇದು ನಿಜ. ಕಾಂಗ್ರೆಸ್‌ ಪಕ್ಷದಿಂದ ಕೆಎಸ್‌ಆರ್‌ಟಿಸಿ ಎಂಡಿಗೆ ಒಂದು ಕೋಟಿ ರೂಗಳ ಚೆಕ್‌ ಹಸ್ತಾಂತರವಾಗುತ್ತಿದ್ದಂತೆಯೇ ಅತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು “ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್‌.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ” ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಕಾರ್ಮಿಕರಿಂದ ಮೂರು ಪಟ್ಟು ಹಣ ವಸೂಲಿಗ ಮುಂದಾಗಿದ್ದ ಸರ್ಕಾರ ಕೂಡಲೇ ಉಚಿತ ಎಂದು ಘೋಷಿಸುವಂತಾಗಿದೆ. ದುಪ್ಪಟ್ಟು ಬಸ್‌ ದರಕ್ಕೆ ಪ್ರಜ್ಞಾವಂತರ, ಕಾರ್ಮಿಕರ, ವಿರೋಧ ಪಕ್ಷಗಳ ತೀವ್ರ ಒತ್ತಡ ಬಂದ ನಂತರ ಅದರಲ್ಲೂ ಕಾಂಗ್ರೆಸ್‌ ಪಕ್ಷ ಒಂದು ಕೋಟಿ ರೂ ನೆರವು ನೀಡಿದ ನಂತರ ಸರ್ಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯು ಕೆಎಸ್ಆರ್ಟಿಸಿ ಎಂಡಿಗೆ 1 ಕೋಟಿ ರುಪಾಯಿ ಚೆಕ್ ನೀಡಿದೆ.

Posted by DK Shivakumar on Saturday, May 2, 2020

ಹಲವು ರಾಜ್ಯಗಳು ಬೇರೆ ಬೇರೆ ರಾಜ್ಯಗಳಲ್ಲಿ ಸಿಕ್ಕಿಕೊಂಡಿರುವ ತಮ್ಮ ಕಾರ್ಮಿಕರನ್ನು ಉಚಿತವಾಗಿ ಆಹಾರ ಸೌಲಭ್ಯ ನೀಡಿ ಕರೆಸಿಕೊಳ್ಳುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ಜಿಲ್ಲೆಯಿಂದ ಜಿಲ್ಲೆಗೆ ಮೂರು ಪಟ್ಟು ಹಣ ನಿಗಧಿ ಮಾಡಿ ರಾಜ್ಯ ಸರ್ಕಾರ ಟೀಕೆಗೊಳಗಾಗಿತ್ತು. ಮೊದಲೇ ಈ ಉಚಿತ ಯೋಜನೆ ಘೋಷಿಸಿದ್ದರೆ ಕಾರ್ಮಿಕರು ಸಂತಸದಿಂದ ತಮ್ಮ ಊರುಗಳನ್ನು ಸೇರುತ್ತಿದ್ದರು. ಈಗ ಈಗಾಗಲೇ ಮೂರು ಪಟ್ಟು ಹಣಕೊಟ್ಟು ಕಣ್ಣೀರಾಕುತ್ತ ಊರೂ ಸೇರಿರುವವರು ಸಹ ಈ ಸರ್ಕಾರವನ್ನು ದೂಷಿಸಲಿದ್ದಾರೆ.

ಏನೇ ಆಗಲಿ ಈಗಲಾದರೂ ಎಲ್ಲಾ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಬೇಕಿದೆ. ಅವರಿಗೆ ಉಚಿತ ಪ್ರಯಾಣದ ಜೊತೆಗೆ ಮುಂದಿನ ಬದುಕಿನ ಬಗೆಗೂ ಸರ್ಕಾರ ಈಗಲೇ ಮುಂಜಾಗ್ರತೆ ವಹಿಸಬೇಕಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is fantastic to st. Publics, help from both side equally. We are all voted one another, in the fast.thay came togetherat this critical moments.
    We thank & remember u for ever

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...