Homeಮುಖಪುಟಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ...

ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ!

- Advertisement -
- Advertisement -

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಒಂದೇ ದರ ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಅವರಿಗೆ ನೆರವಾಗಲು ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ಹೌದು ಇದು ನಿಜ. ಕಾಂಗ್ರೆಸ್‌ ಪಕ್ಷದಿಂದ ಕೆಎಸ್‌ಆರ್‌ಟಿಸಿ ಎಂಡಿಗೆ ಒಂದು ಕೋಟಿ ರೂಗಳ ಚೆಕ್‌ ಹಸ್ತಾಂತರವಾಗುತ್ತಿದ್ದಂತೆಯೇ ಅತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು “ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್‌.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ” ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಕಾರ್ಮಿಕರಿಂದ ಮೂರು ಪಟ್ಟು ಹಣ ವಸೂಲಿಗ ಮುಂದಾಗಿದ್ದ ಸರ್ಕಾರ ಕೂಡಲೇ ಉಚಿತ ಎಂದು ಘೋಷಿಸುವಂತಾಗಿದೆ. ದುಪ್ಪಟ್ಟು ಬಸ್‌ ದರಕ್ಕೆ ಪ್ರಜ್ಞಾವಂತರ, ಕಾರ್ಮಿಕರ, ವಿರೋಧ ಪಕ್ಷಗಳ ತೀವ್ರ ಒತ್ತಡ ಬಂದ ನಂತರ ಅದರಲ್ಲೂ ಕಾಂಗ್ರೆಸ್‌ ಪಕ್ಷ ಒಂದು ಕೋಟಿ ರೂ ನೆರವು ನೀಡಿದ ನಂತರ ಸರ್ಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯು ಕೆಎಸ್ಆರ್ಟಿಸಿ ಎಂಡಿಗೆ 1 ಕೋಟಿ ರುಪಾಯಿ ಚೆಕ್ ನೀಡಿದೆ.

Posted by DK Shivakumar on Saturday, May 2, 2020

ಹಲವು ರಾಜ್ಯಗಳು ಬೇರೆ ಬೇರೆ ರಾಜ್ಯಗಳಲ್ಲಿ ಸಿಕ್ಕಿಕೊಂಡಿರುವ ತಮ್ಮ ಕಾರ್ಮಿಕರನ್ನು ಉಚಿತವಾಗಿ ಆಹಾರ ಸೌಲಭ್ಯ ನೀಡಿ ಕರೆಸಿಕೊಳ್ಳುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ಜಿಲ್ಲೆಯಿಂದ ಜಿಲ್ಲೆಗೆ ಮೂರು ಪಟ್ಟು ಹಣ ನಿಗಧಿ ಮಾಡಿ ರಾಜ್ಯ ಸರ್ಕಾರ ಟೀಕೆಗೊಳಗಾಗಿತ್ತು. ಮೊದಲೇ ಈ ಉಚಿತ ಯೋಜನೆ ಘೋಷಿಸಿದ್ದರೆ ಕಾರ್ಮಿಕರು ಸಂತಸದಿಂದ ತಮ್ಮ ಊರುಗಳನ್ನು ಸೇರುತ್ತಿದ್ದರು. ಈಗ ಈಗಾಗಲೇ ಮೂರು ಪಟ್ಟು ಹಣಕೊಟ್ಟು ಕಣ್ಣೀರಾಕುತ್ತ ಊರೂ ಸೇರಿರುವವರು ಸಹ ಈ ಸರ್ಕಾರವನ್ನು ದೂಷಿಸಲಿದ್ದಾರೆ.

ಏನೇ ಆಗಲಿ ಈಗಲಾದರೂ ಎಲ್ಲಾ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಬೇಕಿದೆ. ಅವರಿಗೆ ಉಚಿತ ಪ್ರಯಾಣದ ಜೊತೆಗೆ ಮುಂದಿನ ಬದುಕಿನ ಬಗೆಗೂ ಸರ್ಕಾರ ಈಗಲೇ ಮುಂಜಾಗ್ರತೆ ವಹಿಸಬೇಕಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is fantastic to st. Publics, help from both side equally. We are all voted one another, in the fast.thay came togetherat this critical moments.
    We thank & remember u for ever

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...