Homeಮುಖಪುಟಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ...

ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ!

- Advertisement -
- Advertisement -

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಒಂದೇ ದರ ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಅವರಿಗೆ ನೆರವಾಗಲು ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ಹೌದು ಇದು ನಿಜ. ಕಾಂಗ್ರೆಸ್‌ ಪಕ್ಷದಿಂದ ಕೆಎಸ್‌ಆರ್‌ಟಿಸಿ ಎಂಡಿಗೆ ಒಂದು ಕೋಟಿ ರೂಗಳ ಚೆಕ್‌ ಹಸ್ತಾಂತರವಾಗುತ್ತಿದ್ದಂತೆಯೇ ಅತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು “ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್‌.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ” ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಕಾರ್ಮಿಕರಿಂದ ಮೂರು ಪಟ್ಟು ಹಣ ವಸೂಲಿಗ ಮುಂದಾಗಿದ್ದ ಸರ್ಕಾರ ಕೂಡಲೇ ಉಚಿತ ಎಂದು ಘೋಷಿಸುವಂತಾಗಿದೆ. ದುಪ್ಪಟ್ಟು ಬಸ್‌ ದರಕ್ಕೆ ಪ್ರಜ್ಞಾವಂತರ, ಕಾರ್ಮಿಕರ, ವಿರೋಧ ಪಕ್ಷಗಳ ತೀವ್ರ ಒತ್ತಡ ಬಂದ ನಂತರ ಅದರಲ್ಲೂ ಕಾಂಗ್ರೆಸ್‌ ಪಕ್ಷ ಒಂದು ಕೋಟಿ ರೂ ನೆರವು ನೀಡಿದ ನಂತರ ಸರ್ಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯು ಕೆಎಸ್ಆರ್ಟಿಸಿ ಎಂಡಿಗೆ 1 ಕೋಟಿ ರುಪಾಯಿ ಚೆಕ್ ನೀಡಿದೆ.

Posted by DK Shivakumar on Saturday, May 2, 2020

ಹಲವು ರಾಜ್ಯಗಳು ಬೇರೆ ಬೇರೆ ರಾಜ್ಯಗಳಲ್ಲಿ ಸಿಕ್ಕಿಕೊಂಡಿರುವ ತಮ್ಮ ಕಾರ್ಮಿಕರನ್ನು ಉಚಿತವಾಗಿ ಆಹಾರ ಸೌಲಭ್ಯ ನೀಡಿ ಕರೆಸಿಕೊಳ್ಳುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ಜಿಲ್ಲೆಯಿಂದ ಜಿಲ್ಲೆಗೆ ಮೂರು ಪಟ್ಟು ಹಣ ನಿಗಧಿ ಮಾಡಿ ರಾಜ್ಯ ಸರ್ಕಾರ ಟೀಕೆಗೊಳಗಾಗಿತ್ತು. ಮೊದಲೇ ಈ ಉಚಿತ ಯೋಜನೆ ಘೋಷಿಸಿದ್ದರೆ ಕಾರ್ಮಿಕರು ಸಂತಸದಿಂದ ತಮ್ಮ ಊರುಗಳನ್ನು ಸೇರುತ್ತಿದ್ದರು. ಈಗ ಈಗಾಗಲೇ ಮೂರು ಪಟ್ಟು ಹಣಕೊಟ್ಟು ಕಣ್ಣೀರಾಕುತ್ತ ಊರೂ ಸೇರಿರುವವರು ಸಹ ಈ ಸರ್ಕಾರವನ್ನು ದೂಷಿಸಲಿದ್ದಾರೆ.

ಏನೇ ಆಗಲಿ ಈಗಲಾದರೂ ಎಲ್ಲಾ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಬೇಕಿದೆ. ಅವರಿಗೆ ಉಚಿತ ಪ್ರಯಾಣದ ಜೊತೆಗೆ ಮುಂದಿನ ಬದುಕಿನ ಬಗೆಗೂ ಸರ್ಕಾರ ಈಗಲೇ ಮುಂಜಾಗ್ರತೆ ವಹಿಸಬೇಕಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is fantastic to st. Publics, help from both side equally. We are all voted one another, in the fast.thay came togetherat this critical moments.
    We thank & remember u for ever

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...