Homeಕರ್ನಾಟಕಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ 'ವಿಸ್ಟ್ರಾನ್' ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

- Advertisement -
- Advertisement -

ಕೋಲಾರ ಬಳಿಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿದ್ದ ದೇಶದ ಏಕೈಕ ಐಫೋನ್ ತಯಾರಿಕ ವಿಸ್ಟ್ರಾನ್‌ನಲ್ಲಿ ಕಾರ್ಮಿಕರು – ಆಡಳಿತ ಮಂಡಳಿಯ ನಡುವಿನ ಜಗಳ ಬೀದಿಗೆ ಬಂದಿದೆ. ನಾಲ್ಕು ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಇಂದು ತಾಳ್ಮೆ ಕಳೆದುಕೊಂಡಿದ್ದು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ವಿಸ್ಟ್ರಾನ್ ಕಂಪನಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, 12 ಸಾವಿರ ನಾಲ್ಕನೇ ದರ್ಜೆಯ ಗುತ್ತಿಗೆ ಉದ್ಯೋಗಗಳನ್ನು ಮಾತ್ರ ಸ್ಥಳೀಯರಿಗೆ ನೀಡಿದೆ. ಅಲ್ಲದೆ ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ 5 ಗಂಟೆ ಸಮಯದಲ್ಲಿ ನೂರಾರು ಕಾರ್ಮಿಕರು ಕಂಪನಿ ವಸ್ತುಗಳನ್ನು ಒಡೆದು ಹಾಕುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಆಡಳಿತ ಮಂಡಳಿಯ ಸದಸ್ಯರ ಕಾರುಗಳನ್ನು ಜಖಂಗೊಳಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠೀ ಪ್ರಹಾರ ನಡೆಸಿ, ಹಲವು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ, ಪೊಲೀಸ್ ಅಧೀಕ್ಷಕ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.

ಇಷ್ಟು ದೊಡ್ಡ ಕಂಪನಿಯಲ್ಲಿ ದುಡಿಯುವ 12 ಸಾವಿರ ಕಾರ್ಮಿಕರಿಗೆ ಕೇವಲ 8-12 ಸಾವಿರ ರೂ ಸಂಬಳವಿದೆ. ಅದನ್ನು ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದಿದ್ದಾರೆ. ಘಟನೆ ಬೆಳಿಗ್ಗೆ 5 ಗಂಟೆಗೆ ಆರಂಭವಾದರೂ ಪೊಲೀಸರು ಸ್ಥಳಕ್ಕೆ ಬರುವಲ್ಲಿ 7 ಗಂಟೆ ಆಗಿದೆ. ಅಷ್ಟರಲ್ಲಿ ಕಾರ್ಮಿಕರು ಅಲ್ಲಿಂದ ಚೆಲ್ಲಾಪಿಲ್ಲಿಯಾಗಿದ್ದಾರೆ. ನಂತರ ರಸ್ತೆಯಲ್ಲಿ ಸಿಕ್ಕ ಸಿಕ್ಕ ಬೇರೆ ಕಂಪನಿಯ ಕಾರ್ಮಿಕರನ್ನು, ಸಾಮಾನ್ಯ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...