ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿ ಮತ್ತು ಬಿಡುಗಡೆಗೆ ಆಗ್ರಹಿಸಿ ರಾಜ್ಯದ ಹಲವು ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೂ ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ದೊಡ್ಡಿಪಾಳ್ಯ ಅವರ ಬಂಧನ ಖಂಡಿಸಿ ಬಿಡುಗಡೆಗೆ ಒತ್ತಾಯಿಸಿದೆ. ಅವರ ಪೂರ್ಣ ಹೇಳಿಕೆ ಕೆಳಗಿನಂತಿದೆ.
ಪತ್ರಕತ೯ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತದೆ. ’20 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ರಾಜದ್ರೋಹ ಸೇರಿದಂತೆ, ಕೆಲ ಪ್ರಕರಣಗಳನ್ನು ದಾಖಲಿಸಿ, ಬಂಧಿಸಿರುವುದು ಖಂಡನೀಯ ಮತ್ತು ಸಮರ್ಥನೀಯ ಅಲ್ಲ.
ನರಸಿಂಹ ಮೂತಿ೯ಯವರು ಬೆಂಗಳೂರಿನಲ್ಲಿಯೇ ವಾಸವಾಗಿದ್ದು, ಪತ್ರಕತ೯ರಾಗಿ ಸಕ್ರಿಯವಾಗಿ ಕಾಯ೯ ನಿವ೯ಹಿಸಿದ್ದಾರೆ ಅಲ್ಲದೆ, ಹಲವು ಜನಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರ ಬಂಧನ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹುನ್ನಾರ ಮತ್ತು ಅಕ್ರಮ. ಇದರಿಂದ ಪತ್ರಕರ್ತರು ನಿರ್ಭಯವಾಗಿ, ವೃತ್ತಿಪರವಾಗಿ, ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗದೇ ಆತಂಕದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ಈ ಕೂಡಲೇ ನರಸಿಂಹ ಮೂರ್ತಿ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ, ನ್ಯಾಯ ಸಮ್ಮತ ತನಿಖೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.