- Advertisement -
- Advertisement -
ರೈತ, ಕಾರ್ಮಿಕ ವಿರೋಧಿ ಹಾಗೂ ಕಾರ್ಪೊರೇಟ್ ಪರವಾದ ನೀತಿಗಳ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ದುಡಿಯುವ ಜನರ 72 ಗಂಟೆಗಳ ಮಹಾ ಧರಣಿ’ ಎರಡನೇ ದಿನಕ್ಕೆ ಕಾಲಿಟ್ಟಿದೆ.
ನಿನ್ನೆಯಿಂದ (ಭಾನುವಾರ) ಆರಂಭಗೊಂಡ ‘ಮಹಾ ಧರಣಿ’ಗೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಜಂಟಿ ಸಮಿತಿ ನೇತೃತ್ವ ವಹಿಸಿದೆ.
ಸಿಪಿಐ, ಸಿಪಿಎಂ, ಸಿಪಿಐಎಂಎಲ್-ಎಲ್, ಆಖಿಲ ಭಾರತ ಫಾರ್ವರ್ಡ್ ಬ್ಲಾಕ್, ಆಮ್ ಆದ್ಮಿ ಪಕ್ಷ (ಎಎಪಿ) ಲೋಕ ತಾಂತ್ರಿಕ ಜನತಾದಳ, ಜನತಾದಳ ಯುನೈಟೆಡ್, ನ್ಯಾಷನಲ್ ಕಾಂಗ್ರೆಸ್ ಪಕ್ಷ ಧರಣಿಗೆ ಬೆಂಬಲ ಸೂಚಿಸಿವೆ.
ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಾರರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ : ರೈತರಿಗೆ ಆರ್ಥಿಕ ನೆರವು: ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿ ವಾಪಸ್