Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...