Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...