Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...