Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...