Homeಕರ್ನಾಟಕದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

ದೇಶದಲ್ಲಿ ಮನುಸ್ಮೃತಿ ಪರ ಆಡಳಿತದಿಂದ ಮಹಿಳೆಯರ ಹಕ್ಕುಗಳ ಹರಣ- ಶೈಲಜಾ ಟೀಚರ್

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜಿಸಿದೆ. ಮಂಗಳವಾರ ಕೇರಳದ ಶಾಸಕಿ, ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಅವರು ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನಾಚರಣೆಯ ಹಕ್ಕೊತ್ತಾಯ ಜಾಥಾ ಮತ್ತು ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿದರು.

”ಎಲ್ಲ ಮಹಿಳೆಯರ ಐಕ್ಯತೆ ಚಿರಾಯುವಾಗಲಿ, ನಾವೆಲ್ಲರೂ ಒಂದಾಗಿ ನ್ಯಾಯಕ್ಕಾಗಿ, ಮಾನವ ಹಕ್ಕುಗಳಿಗಾಗಿ ಹೋರಾಡುತ್ತೇವೆ” ಎಂದು ಘೋಷಣೆ ಕೂಗುತ್ತಾ ಕೆಕೆ ಶೈಲಜಾರವರು ಸಮಾವೇಶಕ್ಕೆ ಚಾಲನೆ ನೀಡಿದರು. ‘ಸಂವಿಧಾನವೇ ಉಸಿರು ಬಹುತ್ವವೇ ಬದುಕು’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ ಆರೋಪ; ಕೇರಳದ ಏಷ್ಯಾನೆಟ್ ನ್ಯೂಸ್‌ ಕಚೇರಿ ಮೇಲೆ ಪೊಲೀಸ್ ರೈಡ್‌

ಸಮಾವೇಶ ಉದ್ಘಾಟಿಸಿದ ಬಳಿಕ ಮಾತನಾಡಿದ  ಶೈಲಜಾ ಟೀಚರ್, ”ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹರಣವಾಗುತ್ತಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದರು.

ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ನಿಯಂತ್ರಿಸುವ ಧಾರ್ಮಿಕ ಮೂಲಭೂತವಾದಿಗಳು ಶೈಲಜಾ ಟೀಚರ್ ಕಳವಳ

”ಇಂದು ಮನುಸ್ಮೃತಿಯ ಪರವಾದ ಆಡಳಿತ ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ನಿರಂತರವಾಗಿ ಕಿತ್ತುಕೊಳ್ಳಲಾಗುತ್ತಿದೆ. ಇಂದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಯುತ್ತಿದೆ. ಧಾರ್ಮಿಕ ಮೂಲಭೂತವಾದ ನಮ್ಮ ದೇಶದ ಬಹಳ ದೊಡ್ಡ ಶತ್ರುವಾಗಿದೆ. ಬಿಲ್ಕಿಸ್‌ಬಾನು ಪ್ರಕರಣದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಗುಜರಾತ್‌ ಸರ್ಕಾರ ಇಂತಹ ಕೊಲೆಗಡುಕರು ಮತ್ತು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದ ಮೇಲೆ ಅವರನ್ನು ಉತ್ತಮ ವ್ಯಕ್ತಿಗಳು ಎಂದು ಬಿಡುಗಡೆ ಮಾಡಿದೆ. ಹೀಗಾಗಿ ಅವರು ಇಂದು ಮುಕ್ತವಾಗಿ ಎಲ್ಲೆಡೆ ತಿರುಗಾಡಿಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

”ಭಾರತದಲ್ಲಿ ಇಂದು ಮಕ್ಕಳ ಸಾವುಗಳು, ಶಿಶು ಮರಣ, ಹೆರಿಗೆಯ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಾವುಗಳು ಸಂಭವಿಸುತ್ತಿವೆ. ನಿರಂತರ ಹೋರಾಟದ ಫಲವಾಗಿ ಶಿಶು ಮತ್ತು ತಾಯಿ ಮರಣದ ಪ್ರಕರಣಗಳು ಕಡಿಮೆ ಆಗಿವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಊಳಿಗಮಾನ್ಯ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧವಾಗಿ ತಮ್ಮ ಎಲ್ಲ ಬಗೆಯ ಹಕ್ಕುಗಳಿಗಾಗಿ ತಮಗೆ ಬೇಕಾಗಿರುವ ಶಿಕ್ಷಣ, ಮತದಾನ, ಸಮಾನತೆ, ಸಮಾನವಾದ ಅವಕಾಶಗಳ ಹಕ್ಕಿಗಾಗಿ ಮಹಿಳೆಯರು ಹೋರಾಟ ಮಾಡಿದ ಫಲವಾಗಿ ನಾವು ಇಲ್ಲಿ ಸೇರಿ ಚರ್ಚಿಸಲು ಸಾಧ್ಯವಾಗಿದೆ” ಎಂದರು.

”ಆಸ್ತಿ ಉಳ್ಳವರಾಗಿರಲಿ ಅಥವಾ ಇಲ್ಲದವರಾಗಿರಲಿ ಎಲ್ಲ ಮಹಿಳೆಯರು ಸಮಾನವಾಗಿರಬೇಕು. ಸಮಾನವಾದಂತಹ ಹಕ್ಕುಗಳಿರಬೇಕು. ಶಿಕ್ಷಣ, ಉದ್ಯೋಗ ಮತ್ತು ಮತದಾನಕ್ಕೆ ಪ್ರಬಲ ಹೋರಾಟ ನಡೆಯಿತು” ಎಂಬುದನ್ನು ಮರೆಯಲಾಗದು” ಎಂದು ಹೇಳಿದರು.

”ಭಾರತದ ಸಂವಿಧಾನ ಅತ್ಯದ್ಭುತ ಸಂವಿಧಾನವಾಗಿದೆ. ಇಡೀ ಪ್ರಪಂಚದಲ್ಲಿರುವಂತಹ ಅತ್ಯುತ್ತಮ ಪ್ರಜಾತಾಂತ್ರಿಕ ಮೌಲ್ಯಗಳನ್ನು ಇಟ್ಟುಕೊಂಡು ನಮ್ಮ ಸಂವಿಧಾನ ರಚನೆಯಾಗಿದೆ. ಇಂತಹ ಸಂವಿಧಾನ ಇಂದು ಅಪಾಯದಲ್ಲಿದ್ದು ಇದನ್ನು ಸಂರಕ್ಷಣೆ ಮಾಡಬೇಕಾಗಿದೆ” ಎಂದು ಶೈಲಜಾ ಎಚ್ಚರಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವಿದ್ಯಾ ಕುಮಾರಿ ಅವರು, ”ಮಹಿಳೆ ಉನ್ನತ ಉದ್ಯೋಗದಲ್ಲಿದ್ದಾರೆ, ಸಾಧನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಗೌರವ ಸಿಗಬಾರದು. ನಮ್ಮ ಸಮಾಜದ ಎಲ್ಲ ಮಹಿಳೆಯರಿಗೂ ಗೌರವ ಸಿಗುವಂತಾಗಬೇಕು. ಕುಟುಂಬ ನಿರ್ವಹಣೆ ಎಂಬುದು ಸುಲಭದ ಮಾತಲ್ಲ. ಅದಕ್ಕಾಗಿ ಇಡೀ ಬದುಕನ್ನು ಸವೆಸುವ ಎಲ್ಲ ಮಹಿಳೆಯರನ್ನು ಇಡೀ ಸಮಾಜ ಗೌರವಿಸಬೇಕು. ಆಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ” ಎಂದು ಹೇಳಿದರು.

ಈ ಮೆರವಣಿಗೆ ಉದ್ಘಾಟನೆಗೂ ಮುನ್ನ ಒಕ್ಕೂಟದ ಸಂಗಾತಿಗಳೆಲ್ಲರೂ ಸೇರಿ ‘ತೂರಬೇಡಿ ಗಾಳಿಗೆ ಹೆಣ್ತನದ ಘನತೆ’ ಆಶಯ ಗೀತೆ ಹಾಡಿದರು. ಟೌನ್‌ಹಾಲ್‌ ಸರ್ಕಲ್‌ನಿಂದ ಅಮಾನಿಕೆರೆ ಗಾಜಿನಮನೆಯವರೆಗೂ ವಿದ್ಯಾರ್ಥಿಗಳು, ಮಹಿಳೆಯರು, ಬಾಲ್ಯ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆಯ ವಿರೋಧಿಸಿ ಬರೆದಿದ್ದ ಪ್ಲಕಾರ್ಡ್ಸ್‌ ಹಿಡಿದು ಮೆರವಣಿಗೆ ನಡೆಸಿದರು. ನಾನಾ ಶಾಲಾ ಮಕ್ಕಳು ಕೋಲಾಟ, ನೃತ್ಯದ ಮೂಲಕ ಅರಿವು ಮೂಡಿಸಿದರೆ, ‘ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು ಮೆರವಣಿಗೆ ಹೊರಡುತ್ತಾರೆ’ ಎಂದು ಹಾಡುತ್ತಾ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆ ಜಾಥಾದಲ್ಲಿ ಹಿರಿಯ ಪತ್ರಕರ್ತೆ ಡಾ. ವಿಜಯಾ, ಸಾಮಾಜಿಕ ಹೋರಾಟಗಾರ್ತಿ ಅಕ್ಕೈಪದ್ಮಸಾಲಿ, ಸಾಹಿತಿ ಬಾ ಹ ರಮಾಕುಮಾರಿ, ಕರ್ನಾಟಕ ರಾಜ್ಯ ಮಹಿಳಾ ಅಲೆಮಾರಿ ಬುಡಕಟ್ಟು ಅಭಿವೃದ್ಧಿ ಮಹಾಸಭಾದ ಹಂದಿಜೋಗಿ ರಾಮಕ್ಕ, ಪೌರಕಾರ್ಮಿಕ ಸಂಘಟನೆಯ ಶ್ವೇತಾ, ಬೀಡಿ ಕಾರ್ಮಿಕರ ಸಂಘದ ಶಹತಾಜ್‌, ಆಸಿಡ್‌ ವಾರಿಯರ್‌ ಜಯಲಕ್ಷ್ಮಿ ಚಿಕ್ಕನಾಯಕನಹಳ್ಳಿ ಹಾಗೂ ಲಿಂಗಾಂತರಿ ಸಮುದಾಯದ ದೀಪಿಕಾ ಭಾಗಿಯಾಗಿದ್ದರು.

ಇದನ್ನೂ ಓದಿ: ಕೆಲಸದ ಅವಧಿ ಹೆಚ್ಚಳ: ಐತಿಹಾಸಿಕ ಹೋರಾಟದ ಆಶಯ, ಯಶಸ್ಸು ಎರಡನ್ನೂ ಈ ಕಾನೂನು ನುಂಗಿ ಹಾಕಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...