Homeಮುಖಪುಟವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

- Advertisement -
- Advertisement -

ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ “ಆರೈಕೆಯಲ್ಲಿನ ಅಸಮಾನತೆಯ ಅಂತ್ಯ” (ಕ್ಲೋಸ್ ದಿ ಕೇರ್ ಗ್ಯಾಪ್) ಎಂಬ ಧ್ಯೇಯ ವಾಕ್ಯದೊಂದಿಗೆ 2022ರ ವಿಶ್ವ ಕ್ಯಾನ್ಸರ್ ದಿನವನ್ನು ಇಂದು ಜಾಗತಿಕ ಮಟ್ಟದಲ್ಲಿ ಆಚರಿಸಲಾಗಿದೆ. ಕ್ಲೋಸ್ ದಿ ಕೇರ್ ಗ್ಯಾಪ್ ಅಭಿಯಾನ ಮೂರು ವರ್ಷಗಳ ಅವಧಿಗೆ ನಡೆಯಲಿದೆ.

ಯೂನಿಯನ್ ಫಾರ್ ಇಂಟರ್‌ನ್ಯಾಷನಲ್‌ ಕ್ಯಾನ್ಸರ್ ಕಂಟ್ರೋಲ್ (ಯುಐಸಿಸಿ) ನೇತೃತ್ವದಲ್ಲಿ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್‌ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಚಿಕಿತ್ಸೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡುತ್ತದೆ.

ಈ ಸಾಲಿನಿಂದ ಮೂರು ವರ್ಷಗಳ ಅವಧಿಯಲ್ಲಿ ‘ಕ್ಲೋಸ್ ದಿ ಕೇರ್ ಗ್ಯಾಪ್’ ಧ್ಯೇಯವಾಕ್ಯದೊಂದಿಗೆ ಜಗತ್ತಿನಾದ್ಯಂತ ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಗುರುತಿಸುವ ಉದ್ದೇಶ ಇಟ್ಟುಕೊಂಡು ಕೆಲಸ ಮಾಡಲಾಗುತ್ತದೆ. ಕೆಲವು ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗೆ ಅಗತ್ಯ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಜೀವನೋತ್ಸಾಹ ತುಂಬುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡಲಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

ಇತ್ತೀಚಿನ ಅಧ್ಯಯನಗಳ ಪ್ರಕಾರ, ವಿಶ್ವದ ಆರು ಜನರಲ್ಲಿ ಒಬ್ಬರು ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಕ್ಷಯ, ಎಚ್ಐವಿ-ಏಡ್ಸ್ ಮತ್ತು ಮಲೇರಿಯಾದಂಥ ಕಾಯಿಲೆಗಳಿಂದ ಸಂಭವಿಸುವ ಸಾವಿನ ಸಂಖ್ಯೆಗಿಂತ ಕ್ಯಾನ್ಸರ್‌ನಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ ಎಂದು ಅಧ್ಯಯನಗಳು ತಿಳಿಸಿವೆ.

ವಿಶ್ವ ಆರೋಗ್ಯ ಸಂಸ್ಥೆ 2020 ರಲ್ಲಿ ಭಾರತದಲ್ಲಿ ನಡೆಸಿರುವ ಅಧ್ಯಯನವೊಂದರ ವರದಿಯ ಮಾಹಿತಿಯಂತೆ ಪ್ರತಿ 10 ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ಒಳಗಾಗುತ್ತಾರೆ. ಪ್ರತಿ 15 ಜನರಲ್ಲಿ ಒಬ್ಬರು ಸಾಯುತ್ತಾರೆ ಎಂಬ ಅಂಶ ಬಹಿರಂಗಪಡಿಸಿದೆ. ಭಾರತದಲ್ಲಿ ಅಂದಾಜು 1.35 ಶತಕೋಟಿ ಜನಸಂಖ್ಯೆ ಇದ್ದು, 2018ರಲ್ಲಿ 1.16 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು, 784,800 ಕ್ಯಾನ್ಸರ್ ಸಾವಿನ ಪ್ರಕರಣಗಳು ವರದಿಯಾಗಿವೆ.

ಕ್ಯಾನ್ಸರ್‌ನಿಂದ ಅತಿ ಹೆಚ್ಚು ಸಾವು ಸಂಭವಿಸುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಭಾರತದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ.12 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.


ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...