Homeಮುಖಪುಟವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

- Advertisement -
- Advertisement -

ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ “ಆರೈಕೆಯಲ್ಲಿನ ಅಸಮಾನತೆಯ ಅಂತ್ಯ” (ಕ್ಲೋಸ್ ದಿ ಕೇರ್ ಗ್ಯಾಪ್) ಎಂಬ ಧ್ಯೇಯ ವಾಕ್ಯದೊಂದಿಗೆ 2022ರ ವಿಶ್ವ ಕ್ಯಾನ್ಸರ್ ದಿನವನ್ನು ಇಂದು ಜಾಗತಿಕ ಮಟ್ಟದಲ್ಲಿ ಆಚರಿಸಲಾಗಿದೆ. ಕ್ಲೋಸ್ ದಿ ಕೇರ್ ಗ್ಯಾಪ್ ಅಭಿಯಾನ ಮೂರು ವರ್ಷಗಳ ಅವಧಿಗೆ ನಡೆಯಲಿದೆ.

ಯೂನಿಯನ್ ಫಾರ್ ಇಂಟರ್‌ನ್ಯಾಷನಲ್‌ ಕ್ಯಾನ್ಸರ್ ಕಂಟ್ರೋಲ್ (ಯುಐಸಿಸಿ) ನೇತೃತ್ವದಲ್ಲಿ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್‌ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಚಿಕಿತ್ಸೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡುತ್ತದೆ.

ಈ ಸಾಲಿನಿಂದ ಮೂರು ವರ್ಷಗಳ ಅವಧಿಯಲ್ಲಿ ‘ಕ್ಲೋಸ್ ದಿ ಕೇರ್ ಗ್ಯಾಪ್’ ಧ್ಯೇಯವಾಕ್ಯದೊಂದಿಗೆ ಜಗತ್ತಿನಾದ್ಯಂತ ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಗುರುತಿಸುವ ಉದ್ದೇಶ ಇಟ್ಟುಕೊಂಡು ಕೆಲಸ ಮಾಡಲಾಗುತ್ತದೆ. ಕೆಲವು ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗೆ ಅಗತ್ಯ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಜೀವನೋತ್ಸಾಹ ತುಂಬುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡಲಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

ಇತ್ತೀಚಿನ ಅಧ್ಯಯನಗಳ ಪ್ರಕಾರ, ವಿಶ್ವದ ಆರು ಜನರಲ್ಲಿ ಒಬ್ಬರು ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಕ್ಷಯ, ಎಚ್ಐವಿ-ಏಡ್ಸ್ ಮತ್ತು ಮಲೇರಿಯಾದಂಥ ಕಾಯಿಲೆಗಳಿಂದ ಸಂಭವಿಸುವ ಸಾವಿನ ಸಂಖ್ಯೆಗಿಂತ ಕ್ಯಾನ್ಸರ್‌ನಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ ಎಂದು ಅಧ್ಯಯನಗಳು ತಿಳಿಸಿವೆ.

ವಿಶ್ವ ಆರೋಗ್ಯ ಸಂಸ್ಥೆ 2020 ರಲ್ಲಿ ಭಾರತದಲ್ಲಿ ನಡೆಸಿರುವ ಅಧ್ಯಯನವೊಂದರ ವರದಿಯ ಮಾಹಿತಿಯಂತೆ ಪ್ರತಿ 10 ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ಒಳಗಾಗುತ್ತಾರೆ. ಪ್ರತಿ 15 ಜನರಲ್ಲಿ ಒಬ್ಬರು ಸಾಯುತ್ತಾರೆ ಎಂಬ ಅಂಶ ಬಹಿರಂಗಪಡಿಸಿದೆ. ಭಾರತದಲ್ಲಿ ಅಂದಾಜು 1.35 ಶತಕೋಟಿ ಜನಸಂಖ್ಯೆ ಇದ್ದು, 2018ರಲ್ಲಿ 1.16 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು, 784,800 ಕ್ಯಾನ್ಸರ್ ಸಾವಿನ ಪ್ರಕರಣಗಳು ವರದಿಯಾಗಿವೆ.

ಕ್ಯಾನ್ಸರ್‌ನಿಂದ ಅತಿ ಹೆಚ್ಚು ಸಾವು ಸಂಭವಿಸುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಭಾರತದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ.12 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.


ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....