Homeಮುಖಪುಟವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

- Advertisement -
- Advertisement -

ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ “ಆರೈಕೆಯಲ್ಲಿನ ಅಸಮಾನತೆಯ ಅಂತ್ಯ” (ಕ್ಲೋಸ್ ದಿ ಕೇರ್ ಗ್ಯಾಪ್) ಎಂಬ ಧ್ಯೇಯ ವಾಕ್ಯದೊಂದಿಗೆ 2022ರ ವಿಶ್ವ ಕ್ಯಾನ್ಸರ್ ದಿನವನ್ನು ಇಂದು ಜಾಗತಿಕ ಮಟ್ಟದಲ್ಲಿ ಆಚರಿಸಲಾಗಿದೆ. ಕ್ಲೋಸ್ ದಿ ಕೇರ್ ಗ್ಯಾಪ್ ಅಭಿಯಾನ ಮೂರು ವರ್ಷಗಳ ಅವಧಿಗೆ ನಡೆಯಲಿದೆ.

ಯೂನಿಯನ್ ಫಾರ್ ಇಂಟರ್‌ನ್ಯಾಷನಲ್‌ ಕ್ಯಾನ್ಸರ್ ಕಂಟ್ರೋಲ್ (ಯುಐಸಿಸಿ) ನೇತೃತ್ವದಲ್ಲಿ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್‌ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಚಿಕಿತ್ಸೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡುತ್ತದೆ.

ಈ ಸಾಲಿನಿಂದ ಮೂರು ವರ್ಷಗಳ ಅವಧಿಯಲ್ಲಿ ‘ಕ್ಲೋಸ್ ದಿ ಕೇರ್ ಗ್ಯಾಪ್’ ಧ್ಯೇಯವಾಕ್ಯದೊಂದಿಗೆ ಜಗತ್ತಿನಾದ್ಯಂತ ಕ್ಯಾನ್ಸರ್ ಆರೈಕೆಯಲ್ಲಿನ ಅಸಮಾನತೆಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಗುರುತಿಸುವ ಉದ್ದೇಶ ಇಟ್ಟುಕೊಂಡು ಕೆಲಸ ಮಾಡಲಾಗುತ್ತದೆ. ಕೆಲವು ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗೆ ಅಗತ್ಯ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಜೀವನೋತ್ಸಾಹ ತುಂಬುವ ನಿಟ್ಟಿನಲ್ಲಿ ಯುಐಸಿಸಿ ಕೆಲಸ ಮಾಡಲಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

ಇತ್ತೀಚಿನ ಅಧ್ಯಯನಗಳ ಪ್ರಕಾರ, ವಿಶ್ವದ ಆರು ಜನರಲ್ಲಿ ಒಬ್ಬರು ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಾರೆ. ಕ್ಷಯ, ಎಚ್ಐವಿ-ಏಡ್ಸ್ ಮತ್ತು ಮಲೇರಿಯಾದಂಥ ಕಾಯಿಲೆಗಳಿಂದ ಸಂಭವಿಸುವ ಸಾವಿನ ಸಂಖ್ಯೆಗಿಂತ ಕ್ಯಾನ್ಸರ್‌ನಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ ಎಂದು ಅಧ್ಯಯನಗಳು ತಿಳಿಸಿವೆ.

ವಿಶ್ವ ಆರೋಗ್ಯ ಸಂಸ್ಥೆ 2020 ರಲ್ಲಿ ಭಾರತದಲ್ಲಿ ನಡೆಸಿರುವ ಅಧ್ಯಯನವೊಂದರ ವರದಿಯ ಮಾಹಿತಿಯಂತೆ ಪ್ರತಿ 10 ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್‌ಗೆ ಒಳಗಾಗುತ್ತಾರೆ. ಪ್ರತಿ 15 ಜನರಲ್ಲಿ ಒಬ್ಬರು ಸಾಯುತ್ತಾರೆ ಎಂಬ ಅಂಶ ಬಹಿರಂಗಪಡಿಸಿದೆ. ಭಾರತದಲ್ಲಿ ಅಂದಾಜು 1.35 ಶತಕೋಟಿ ಜನಸಂಖ್ಯೆ ಇದ್ದು, 2018ರಲ್ಲಿ 1.16 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು, 784,800 ಕ್ಯಾನ್ಸರ್ ಸಾವಿನ ಪ್ರಕರಣಗಳು ವರದಿಯಾಗಿವೆ.

ಕ್ಯಾನ್ಸರ್‌ನಿಂದ ಅತಿ ಹೆಚ್ಚು ಸಾವು ಸಂಭವಿಸುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಭಾರತದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ.12 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.


ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...