Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....