Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...