Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...