Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...