Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...