Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...