Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...