Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....