Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...