Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...