Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...