Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...