Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...