Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...