Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....