Homeಮುಖಪುಟಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ...

ಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಆದರೆ ಇಂದು??

- Advertisement -
- Advertisement -

ಮಾರ್ಚ್ ಇಪ್ಪತ್ತನೇ ದಿನಾಂಕವನ್ನು ವಿಶ್ವ ಗುಬ್ಬಚ್ಚಿಗಳ ದಿನವನ್ನಾಗಿ‌ ಆಚರಿಸಲಾಗುತ್ತದೆ.‌ (World house sparrow day) ಪಕ್ಷಿ ಪ್ರೇಮಿಗಳ ಹೊರತಾಗಿ ಹೆಚ್ಚಿನವರು ಇದರ ಬಗ್ಗೆ ಆಸ್ಥೆ ತೋರುವುದೂ ಇಲ್ಲ.

‌ನಿಸ್ಸಂಶಯವಾಗಿಯೂ ಅತ್ಯಂತ ಕ್ಷಿಪ್ರಗತಿಯಲ್ಲಿ ಅಳಿವಿನಂಚಿಗೆ ಸರಿಯುತ್ತಿರುವ ಪ್ರಮುಖ ಪಕ್ಷಿಗಳಲ್ಲಿ ಗುಬ್ಬಚ್ಚಿ ಪ್ರಮುಖವಾದುದು. ಸಾಮಾನ್ಯವಾಗಿ ಚಿಕ್ಕದಾದ ಶರೀರವಿರುವವರ ಬಗ್ಗೆ ಬರೆಯುವಾಗ
ಗುಬ್ಬಚ್ಚಿ ದೇಹದವನು/ಳು ಎಂಬ ಉಪಮೆ ಬಳಸಲಾಗುತ್ತದೆ. ಅದಕ್ಕೆ ಕಾರಣ ಗುಬ್ಬಚ್ಚಿಯ ಪುಟ್ಟ ದೇಹ.
ಗುಬ್ಬಚ್ಚಿಗಳು ಸಾಮಾನ್ಯವಾಗಿ ಜನರ ನಡುವೆಯೇ ಗೂಡು ಕಟ್ಟುವುದರಿಂದಲೇ ಅವನ್ನು ಮನೆ ಗುಬ್ಬಚ್ಚಿ ಎನ್ನುತ್ತಾರೆ.

ಗುಬ್ಬಚ್ಚಿಗಳನ್ನು ಹುಡುಕಲು ಗುಡ್ಡ, ಬೆಟ್ಟ, ತೋಟ, ಕಾಡು,ಹಳ್ಳಿಗಳಿಗೆ ಹೋಗಬೇಕಾಗಿದ್ದಿರಲಿಲ್ಲ. ಅದು ಅತ್ಯಂತ ಸರಳ ಮತ್ತು ಕಲಾತ್ಮಕ ಗೂಡುಗಳನ್ನು ಹಂಚಿನ ಕಟ್ಟಡದ ಮೇಲ್ಚಾವಣಿಯ ಒಳಭಾಗದ ಪಕ್ಕಾಸು, ರೀಪುಗಳನ್ನು ಆಧಾರವಾಗಿಟ್ಟುಕೊಂಡು ಕಟ್ಟುತ್ತವೆ. ಅವು ಕಸಗಳ ರಾಶಿಯನ್ನೇ ತಂದು ಹಾಕುತ್ತವೆಂದು, ಹಿಕ್ಕೆ ಹಾಕುತ್ತವೆಂದೂ ನಾವೆಲ್ಲಾ ಅವುಗಳನ್ನು ಓಡಿಸುತ್ತೇವೆ. ನಾವೆಷ್ಟೇ ಓಡಿಸಿದರೂ ಅದು ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದು ಅಷ್ಟು ಸುಲಭವಾಗಿ ಆ ಸ್ಥಳವನ್ನು ಬಿಟ್ಟು ಹೋಗುವುದಿಲ್ಲ. ನಾವು ಮತ್ತೆ ಮತ್ತೆ ಅದರ ಗೂಡನ್ನು ಕಿತ್ತೆಸೆದರೆ ಅಪಾಯದ ಮುನ್ಸೂಚನೆಯರಿತು ಅದು ಬೇರೆ ಸ್ಥಳ ಹುಡುಕುತ್ತದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಅದು ಮನುಷ್ಯನಿಂದ ತನಗೆ ಮತ್ತು ತನ್ನ ಸಂತಾನಕ್ಕೆ ಅಪಾಯವಿಲ್ಲ ಎಂಬ ಕಾರಣಕ್ಕೂ ಮನುಷ್ಯನ ವಾಸಸ್ಥಾನವನ್ನೇ ಹೆಚ್ಚು ಇಷ್ಟಪಡುತ್ತದೆ. ಆದರೆ ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಪ್ರಸ್ತುತ ಗುಬ್ಬಚ್ಚಿಗಳ ಸಂತಾನ ಶೀಘ್ರಗತಿಯಲ್ಲಿ ಅಳಿವಿನಂಚಿಗೆ ಸಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗುಬ್ಬಚ್ಚಿಗಳನ್ನು ಚಿತ್ರದಲ್ಲೋ, ಟಿ.ವಿ.ಪರದೆಯ ಮೇಲೋ ನಮ್ಮ ಮಕ್ಕಳಿಗೆ ತೋರಿಸಬೇಕಾದ ದಿನಗಳು ಬೇಗನೇ ಬರಬಹುದು.

ಸುಮಾರು ಹದಿನೈದಿಪ್ಪತ್ತು ವರ್ಷಗಳ ಹಿಂದೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ, ಎಳೆಯ ಮಕ್ಕಳಿಗೆಲ್ಲಾ ಗುಬ್ಬಚ್ಚಿಗಳ ಬಗ್ಗೆ ಒಳ್ಳೆಯ ತಿಳುವಳಿಕೆ ಇತ್ತು. ಇಂದು ಗುಬ್ಬಚ್ಚಿಗಳ ಬಗ್ಗೆ ಪಕ್ಷಿ ಶಾಸ್ತ್ರಜ್ಞರು, ಪರಿಸರ ತಜ್ಞರು ಮಾತ್ರ ಅಧಿಕೃತವಾಗಿ ಮಾತನಾಡಬಲ್ಲರೇನೋ ಎಂಬಷ್ಟರ ಮಟ್ಟಿಗೆ ಅದರ ಸಂತತಿಯೂ ವಿರಳವಾಗುತ್ತಿದೆ ಮತ್ತು ಸ್ವತಃ ಅದೂ ಮಾನವನಿಂದ ದೂರವಾಗುತ್ತಿದೆ.

ಗುಬ್ಬಚ್ಚಿ, ಪಾರಿವಾಳ, ಕಾಗೆಗಳ ಹೊರತಾದ ಹೆಚ್ಚಿನೆಲ್ಲಾ ಪಕ್ಷಿಗಳ ಜೀವನ ಶೈಲಿಯ ಬಗ್ಗೆ ಆಳವಾದ ಮಾಹಿತಿಯಿರುವುದು ಪಕ್ಷಿ ತಜ್ಞರಿಗೆ ಮತ್ತು ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಮಾತ್ರ. ಆದರೆ ಗುಬ್ಬಚ್ಚಿಯ ಜೀವನ ಶೈಲಿ, ಮೊಟ್ಟೆ ಇಡುವ ಸಮಯ ಮತ್ತು ಕ್ರಮ, ಮೊಟ್ಟೆಗೆ ಕಾವು ಕೊಡಲು ಬೇಕಾಗುವ ಸಮಯ, ಅವುಗಳ ಆಹಾರ, ಗೂಡು ಕಟ್ಟುವ ಕ್ರಮ ಇತ್ಯಾದಿಗಳ ಬಗೆಗೆಲ್ಲಾ ನಮ್ಮ ಹಿರಿಯರು ಅಧಿಕೃತವಾಗಿ ಮಾತನಾಡಬಲ್ಲಷ್ಟು ಮಾಹಿತಿ ಕೊಡುತ್ತಿದ್ದರು.ಅಷ್ಟರ ಮಟ್ಟಿಗೆ ಗುಬ್ಬಚ್ಚಿಗಳು ಮನುಷ್ಯರೊಂದಿಗೆ ನಿಕಟ ಸಂಪರ್ಕ ಹೊಂದಿತ್ತು.

ಯಾವುದೇ ವೈವಿಧ್ಯಮಯ ಪಕ್ಷಿ ಸಂಕುಲವನ್ನು ನೋಡಬೇಕಾದರೆ ಹಳ್ಳಿಗಳಿಗೆ ಹೋಗಬೇಕಾಗುತ್ತದೆ. ಬೆಟ್ಟ, ಗುಡ್ಡ, ತೋಟ, ಕಾಡು ಮುಂತಾದ ಹಸಿರಾಗಿರುವ ಪ್ರಕೃತಿಯ ಮಡಿಲನ್ನೇ ಹೆಚ್ಚಿನ ಪಕ್ಷಿ ಸಂಕುಲ ಆಯ್ದುಕೊಳ್ಳುತ್ತವೆ. ಆದರೆ ಗುಬ್ಬಚ್ಚಿ ಮಾತ್ರ ಸರ್ವವ್ಯಾಪಿ. ಅವು ನಗರ,ಪಟ್ಟಣ, ಹಳ್ಳಿಗಳ ಗಡಿಗಳಿಲ್ಲದೇ ಎಲ್ಲೆಂದರಲ್ಲಿ ಕಾಣಸಿಗುತ್ತಿತ್ತು. ಗುಬ್ಬಚ್ಚಿ ಸಂತತಿ ವಿನಾಶದಂಚಿಗೆ ಸರಿದುದರ ಹಿಂದಿನ ಕಾರಣಗಳನ್ನು ಪಕ್ಷಿ-ಪರಿಸರ ತಜ್ಞರಷ್ಟೇ ಕರಾರುವಾಕ್ಕಾಗಿ ನಮ್ಮ ಹಿರಿಯರೂ ನೀಡಬಲ್ಲರು. ಅದಕ್ಕೆ ಕಾರಣ ಗುಬ್ಬಚ್ಚಿ ಮತ್ತು ಮನುಷ್ಯನ ನಿಕಟತೆ.

ಕಾರಣಗಳು 

ಹೆಂಚಿನ ಮನೆ-ಕಟ್ಟಡಗಳು ಕಡಿಮೆಯಾಗಿ ಆರ್.ಸಿ.ಸಿ. ಕಟ್ಟಡಗಳು ಹೆಚ್ಚಿದ್ದರಿಂದ ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಅನನುಕೂಲವುಂಟಾಗಿದೆ. ಆರ್.ಸಿ.ಸಿ. ಮನೆಗಳಲ್ಲಿ ಪಕ್ಕಾಸು, ರೀಪುಗಳು ಇಲ್ಲದ್ದರಿಂದ ಅವುಗಳಲ್ಲಿ ಗೂಡು ಕಟ್ಟಲು ಆಧಾರಗಳಿಲ್ಲ.

-ಹೆಂಚಿನ ಮನೆಗಳಲ್ಲಾದರೂ ಹದಿನೈದಿಪ್ಪತ್ತು ವರ್ಷಗಳ ಹಿಂದೆ ಇಂದಿನಂತೆ ಫ್ಯಾನ್‌ಗಳ ಬಳಕೆ ವ್ಯಾಪಕವಾಗಿರಲಿಲ್ಲ. ಗುಬ್ಬಚ್ಚಿ ಸದಾ ಚಟುವಟಿಕೆಯಲ್ಲಿರುವ ಪಕ್ಷಿಯಾದ್ದರಿಂದ ಒಂದೇ ಕಡೆ ಹೆಚ್ಚು ಹೊತ್ತು ನಿಲ್ಲುವುದಿಲ್ಲ. ಸಹಜ ಸ್ವಭಾವದಂತೆ ಆಚೀಚೆ ಹಾರಾಡುತ್ತಿರುತ್ತದೆ. ಫ್ಯಾನ್‌ಗಳು ಚಾಲೂ ಇದ್ದಾಗೆಲ್ಲಾ ಫ್ಯಾನ್ ರೆಕ್ಕೆಗಳಿಗೆ ಸಿಕ್ಕಿ ಗುಬ್ಬಚ್ಚಿಗಳು ಸಾಯುವುದು ಹೆಚ್ಚಾಯಿತು.

-ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಬೇಕಾಗುವ ಅನುಕೂಲತೆಗಳು ಕ್ಷೀಣಿಸಿದುದರ ಪರಿಣಾಮ ಅವುಗಳ ಮೊಟ್ಟೆಗಳು ನಾಶವಾಗಿ ಗುಬ್ಬಚ್ಚಿ ಸಂತಾನ ಕ್ಷೀಣಿಸಲಾರಂಭವಾಯಿತು.

-ಮಾನವ ಪರಿಸರದಲ್ಲಿರುವ ಗುಬ್ಬಚ್ಚಿ ಗೂಡುಗಳ ಮೇಲೆ ಮಾನವನ ಕ್ರೌರ್ಯದಿಂದ ಮೊಟ್ಟೆಗಳು ನಾಶಗೊಂಡು ಸಂತತಿ ಕ್ಷೀಣಿಸುತ್ತಿದೆ.

-ಮೊಬೈಲ್ ಫೋನ್ ಬಳಕೆ ವ್ಯಾಪಕವಾದುದರ ಪರಿಣಾಮ ನೆಟ್‌ವರ್ಕ್ ಕವರೇಜ್‌ಗಾಗಿ ಹಳ್ಳಿ ಹಳ್ಳಿಗಳಲ್ಲೂ, ಅರಣ್ಯ ಪ್ರದೇಶಗಳ ಮಧ್ಯೆಯೂ ಮೊಬೈಲ್ ಗೋಪುರಗಳು ಹೆಚ್ಚಾಗುತ್ತಾ ಅದರ ಪರಿಣಾಮ ಗುಬ್ಬಚ್ಚಿ ಸಂತತಿಗಳ ಮೇಲೆ ಬೀರುತ್ತಿದೆ. ಒಟ್ಟಿನಲ್ಲಿ ಹೆಚ್ಚುತ್ತಿರುವ ಸೂಕ್ಷ್ಮ ತರಂಗ ಗೋಪುರಗಳು ಗುಬ್ಬಚ್ಚಿ ಸಂತಾನಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ.

-ಗುಬ್ಬಚ್ಚಿಗಳ ಮುಖ್ಯ ಆಹಾರ ಹೊಲಗದ್ದೆಗಳಲ್ಲಿರುವ ಚಿಕ್ಕ ಪುಟ್ಟ ಕ್ರಿಮಿ ಕೀಟಗಳು ಮತ್ತು ಕಾಳುಗಳು. ಹೊಲಗದ್ದೆಗಳು ಕಡಿಮೆಯಾಗುತ್ತಾ ಅವುಗಳ ಆಹಾರ ಮೂಲಗಳ ಮೇಲೂ ಪರಿಣಾಮವುಂಟಾಯಿತು.

– ಗುಬ್ಬಚ್ಚಿಗಳು ತಮ್ಮ ಆಹಾರವನ್ನು ಹೊಲಗದ್ದೆಗಳಲ್ಲಿ ಹುಡುಕುವುದರಿಂದ ಹೊಲಗದ್ದೆಗಳಿಗೆ ಸಿಂಪಡಿಸುವ ಕ್ರಿಮಿ, ಕೀಟ ನಾಶಕಗಳು ಗುಬ್ಬಚ್ಚಿಗಳ ಪ್ರಾಣಕ್ಕೂ ಎರವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...