Homeಮುಖಪುಟಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ...

ಇಂದು ವಿಶ್ವ ಗುಬ್ಬಚ್ಚಿ ದಿನ : ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಆದರೆ ಇಂದು??

- Advertisement -
- Advertisement -

ಮಾರ್ಚ್ ಇಪ್ಪತ್ತನೇ ದಿನಾಂಕವನ್ನು ವಿಶ್ವ ಗುಬ್ಬಚ್ಚಿಗಳ ದಿನವನ್ನಾಗಿ‌ ಆಚರಿಸಲಾಗುತ್ತದೆ.‌ (World house sparrow day) ಪಕ್ಷಿ ಪ್ರೇಮಿಗಳ ಹೊರತಾಗಿ ಹೆಚ್ಚಿನವರು ಇದರ ಬಗ್ಗೆ ಆಸ್ಥೆ ತೋರುವುದೂ ಇಲ್ಲ.

‌ನಿಸ್ಸಂಶಯವಾಗಿಯೂ ಅತ್ಯಂತ ಕ್ಷಿಪ್ರಗತಿಯಲ್ಲಿ ಅಳಿವಿನಂಚಿಗೆ ಸರಿಯುತ್ತಿರುವ ಪ್ರಮುಖ ಪಕ್ಷಿಗಳಲ್ಲಿ ಗುಬ್ಬಚ್ಚಿ ಪ್ರಮುಖವಾದುದು. ಸಾಮಾನ್ಯವಾಗಿ ಚಿಕ್ಕದಾದ ಶರೀರವಿರುವವರ ಬಗ್ಗೆ ಬರೆಯುವಾಗ
ಗುಬ್ಬಚ್ಚಿ ದೇಹದವನು/ಳು ಎಂಬ ಉಪಮೆ ಬಳಸಲಾಗುತ್ತದೆ. ಅದಕ್ಕೆ ಕಾರಣ ಗುಬ್ಬಚ್ಚಿಯ ಪುಟ್ಟ ದೇಹ.
ಗುಬ್ಬಚ್ಚಿಗಳು ಸಾಮಾನ್ಯವಾಗಿ ಜನರ ನಡುವೆಯೇ ಗೂಡು ಕಟ್ಟುವುದರಿಂದಲೇ ಅವನ್ನು ಮನೆ ಗುಬ್ಬಚ್ಚಿ ಎನ್ನುತ್ತಾರೆ.

ಗುಬ್ಬಚ್ಚಿಗಳನ್ನು ಹುಡುಕಲು ಗುಡ್ಡ, ಬೆಟ್ಟ, ತೋಟ, ಕಾಡು,ಹಳ್ಳಿಗಳಿಗೆ ಹೋಗಬೇಕಾಗಿದ್ದಿರಲಿಲ್ಲ. ಅದು ಅತ್ಯಂತ ಸರಳ ಮತ್ತು ಕಲಾತ್ಮಕ ಗೂಡುಗಳನ್ನು ಹಂಚಿನ ಕಟ್ಟಡದ ಮೇಲ್ಚಾವಣಿಯ ಒಳಭಾಗದ ಪಕ್ಕಾಸು, ರೀಪುಗಳನ್ನು ಆಧಾರವಾಗಿಟ್ಟುಕೊಂಡು ಕಟ್ಟುತ್ತವೆ. ಅವು ಕಸಗಳ ರಾಶಿಯನ್ನೇ ತಂದು ಹಾಕುತ್ತವೆಂದು, ಹಿಕ್ಕೆ ಹಾಕುತ್ತವೆಂದೂ ನಾವೆಲ್ಲಾ ಅವುಗಳನ್ನು ಓಡಿಸುತ್ತೇವೆ. ನಾವೆಷ್ಟೇ ಓಡಿಸಿದರೂ ಅದು ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದು ಅಷ್ಟು ಸುಲಭವಾಗಿ ಆ ಸ್ಥಳವನ್ನು ಬಿಟ್ಟು ಹೋಗುವುದಿಲ್ಲ. ನಾವು ಮತ್ತೆ ಮತ್ತೆ ಅದರ ಗೂಡನ್ನು ಕಿತ್ತೆಸೆದರೆ ಅಪಾಯದ ಮುನ್ಸೂಚನೆಯರಿತು ಅದು ಬೇರೆ ಸ್ಥಳ ಹುಡುಕುತ್ತದೆ.

ಸುಮಾರು ಹತ್ತು ವರ್ಷಗಳ ಹಿಂದೆ ಗುಬ್ಬಚ್ಚಿ ಗೂಡಿರದ ಮನೆಗಳೇ ಇರಲಿಲ್ಲ ಎನ್ನುವಷ್ಟರ ಮಟ್ಟಿಗೆ ಅವುಗಳು ಮಾನವನ ಜೊತೆ ನಿಕಟವಾಗಿ ಬದುಕುತ್ತಿತ್ತು. ಅದು ಮನುಷ್ಯನಿಂದ ತನಗೆ ಮತ್ತು ತನ್ನ ಸಂತಾನಕ್ಕೆ ಅಪಾಯವಿಲ್ಲ ಎಂಬ ಕಾರಣಕ್ಕೂ ಮನುಷ್ಯನ ವಾಸಸ್ಥಾನವನ್ನೇ ಹೆಚ್ಚು ಇಷ್ಟಪಡುತ್ತದೆ. ಆದರೆ ನಾವು ಮಾತ್ರ ಆ ಪುಟ್ಟ ಹಕ್ಕಿಯ ಭರವಸೆಗೆ ಮೋಸ ಮಾಡುತ್ತಿದ್ದೇವೆ.

ಪ್ರಸ್ತುತ ಗುಬ್ಬಚ್ಚಿಗಳ ಸಂತಾನ ಶೀಘ್ರಗತಿಯಲ್ಲಿ ಅಳಿವಿನಂಚಿಗೆ ಸಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗುಬ್ಬಚ್ಚಿಗಳನ್ನು ಚಿತ್ರದಲ್ಲೋ, ಟಿ.ವಿ.ಪರದೆಯ ಮೇಲೋ ನಮ್ಮ ಮಕ್ಕಳಿಗೆ ತೋರಿಸಬೇಕಾದ ದಿನಗಳು ಬೇಗನೇ ಬರಬಹುದು.

ಸುಮಾರು ಹದಿನೈದಿಪ್ಪತ್ತು ವರ್ಷಗಳ ಹಿಂದೆ ಸಾಮಾನ್ಯರಲ್ಲಿ ಸಾಮಾನ್ಯರಿಗೆ, ಎಳೆಯ ಮಕ್ಕಳಿಗೆಲ್ಲಾ ಗುಬ್ಬಚ್ಚಿಗಳ ಬಗ್ಗೆ ಒಳ್ಳೆಯ ತಿಳುವಳಿಕೆ ಇತ್ತು. ಇಂದು ಗುಬ್ಬಚ್ಚಿಗಳ ಬಗ್ಗೆ ಪಕ್ಷಿ ಶಾಸ್ತ್ರಜ್ಞರು, ಪರಿಸರ ತಜ್ಞರು ಮಾತ್ರ ಅಧಿಕೃತವಾಗಿ ಮಾತನಾಡಬಲ್ಲರೇನೋ ಎಂಬಷ್ಟರ ಮಟ್ಟಿಗೆ ಅದರ ಸಂತತಿಯೂ ವಿರಳವಾಗುತ್ತಿದೆ ಮತ್ತು ಸ್ವತಃ ಅದೂ ಮಾನವನಿಂದ ದೂರವಾಗುತ್ತಿದೆ.

ಗುಬ್ಬಚ್ಚಿ, ಪಾರಿವಾಳ, ಕಾಗೆಗಳ ಹೊರತಾದ ಹೆಚ್ಚಿನೆಲ್ಲಾ ಪಕ್ಷಿಗಳ ಜೀವನ ಶೈಲಿಯ ಬಗ್ಗೆ ಆಳವಾದ ಮಾಹಿತಿಯಿರುವುದು ಪಕ್ಷಿ ತಜ್ಞರಿಗೆ ಮತ್ತು ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಮಾತ್ರ. ಆದರೆ ಗುಬ್ಬಚ್ಚಿಯ ಜೀವನ ಶೈಲಿ, ಮೊಟ್ಟೆ ಇಡುವ ಸಮಯ ಮತ್ತು ಕ್ರಮ, ಮೊಟ್ಟೆಗೆ ಕಾವು ಕೊಡಲು ಬೇಕಾಗುವ ಸಮಯ, ಅವುಗಳ ಆಹಾರ, ಗೂಡು ಕಟ್ಟುವ ಕ್ರಮ ಇತ್ಯಾದಿಗಳ ಬಗೆಗೆಲ್ಲಾ ನಮ್ಮ ಹಿರಿಯರು ಅಧಿಕೃತವಾಗಿ ಮಾತನಾಡಬಲ್ಲಷ್ಟು ಮಾಹಿತಿ ಕೊಡುತ್ತಿದ್ದರು.ಅಷ್ಟರ ಮಟ್ಟಿಗೆ ಗುಬ್ಬಚ್ಚಿಗಳು ಮನುಷ್ಯರೊಂದಿಗೆ ನಿಕಟ ಸಂಪರ್ಕ ಹೊಂದಿತ್ತು.

ಯಾವುದೇ ವೈವಿಧ್ಯಮಯ ಪಕ್ಷಿ ಸಂಕುಲವನ್ನು ನೋಡಬೇಕಾದರೆ ಹಳ್ಳಿಗಳಿಗೆ ಹೋಗಬೇಕಾಗುತ್ತದೆ. ಬೆಟ್ಟ, ಗುಡ್ಡ, ತೋಟ, ಕಾಡು ಮುಂತಾದ ಹಸಿರಾಗಿರುವ ಪ್ರಕೃತಿಯ ಮಡಿಲನ್ನೇ ಹೆಚ್ಚಿನ ಪಕ್ಷಿ ಸಂಕುಲ ಆಯ್ದುಕೊಳ್ಳುತ್ತವೆ. ಆದರೆ ಗುಬ್ಬಚ್ಚಿ ಮಾತ್ರ ಸರ್ವವ್ಯಾಪಿ. ಅವು ನಗರ,ಪಟ್ಟಣ, ಹಳ್ಳಿಗಳ ಗಡಿಗಳಿಲ್ಲದೇ ಎಲ್ಲೆಂದರಲ್ಲಿ ಕಾಣಸಿಗುತ್ತಿತ್ತು. ಗುಬ್ಬಚ್ಚಿ ಸಂತತಿ ವಿನಾಶದಂಚಿಗೆ ಸರಿದುದರ ಹಿಂದಿನ ಕಾರಣಗಳನ್ನು ಪಕ್ಷಿ-ಪರಿಸರ ತಜ್ಞರಷ್ಟೇ ಕರಾರುವಾಕ್ಕಾಗಿ ನಮ್ಮ ಹಿರಿಯರೂ ನೀಡಬಲ್ಲರು. ಅದಕ್ಕೆ ಕಾರಣ ಗುಬ್ಬಚ್ಚಿ ಮತ್ತು ಮನುಷ್ಯನ ನಿಕಟತೆ.

ಕಾರಣಗಳು 

ಹೆಂಚಿನ ಮನೆ-ಕಟ್ಟಡಗಳು ಕಡಿಮೆಯಾಗಿ ಆರ್.ಸಿ.ಸಿ. ಕಟ್ಟಡಗಳು ಹೆಚ್ಚಿದ್ದರಿಂದ ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಅನನುಕೂಲವುಂಟಾಗಿದೆ. ಆರ್.ಸಿ.ಸಿ. ಮನೆಗಳಲ್ಲಿ ಪಕ್ಕಾಸು, ರೀಪುಗಳು ಇಲ್ಲದ್ದರಿಂದ ಅವುಗಳಲ್ಲಿ ಗೂಡು ಕಟ್ಟಲು ಆಧಾರಗಳಿಲ್ಲ.

-ಹೆಂಚಿನ ಮನೆಗಳಲ್ಲಾದರೂ ಹದಿನೈದಿಪ್ಪತ್ತು ವರ್ಷಗಳ ಹಿಂದೆ ಇಂದಿನಂತೆ ಫ್ಯಾನ್‌ಗಳ ಬಳಕೆ ವ್ಯಾಪಕವಾಗಿರಲಿಲ್ಲ. ಗುಬ್ಬಚ್ಚಿ ಸದಾ ಚಟುವಟಿಕೆಯಲ್ಲಿರುವ ಪಕ್ಷಿಯಾದ್ದರಿಂದ ಒಂದೇ ಕಡೆ ಹೆಚ್ಚು ಹೊತ್ತು ನಿಲ್ಲುವುದಿಲ್ಲ. ಸಹಜ ಸ್ವಭಾವದಂತೆ ಆಚೀಚೆ ಹಾರಾಡುತ್ತಿರುತ್ತದೆ. ಫ್ಯಾನ್‌ಗಳು ಚಾಲೂ ಇದ್ದಾಗೆಲ್ಲಾ ಫ್ಯಾನ್ ರೆಕ್ಕೆಗಳಿಗೆ ಸಿಕ್ಕಿ ಗುಬ್ಬಚ್ಚಿಗಳು ಸಾಯುವುದು ಹೆಚ್ಚಾಯಿತು.

-ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಬೇಕಾಗುವ ಅನುಕೂಲತೆಗಳು ಕ್ಷೀಣಿಸಿದುದರ ಪರಿಣಾಮ ಅವುಗಳ ಮೊಟ್ಟೆಗಳು ನಾಶವಾಗಿ ಗುಬ್ಬಚ್ಚಿ ಸಂತಾನ ಕ್ಷೀಣಿಸಲಾರಂಭವಾಯಿತು.

-ಮಾನವ ಪರಿಸರದಲ್ಲಿರುವ ಗುಬ್ಬಚ್ಚಿ ಗೂಡುಗಳ ಮೇಲೆ ಮಾನವನ ಕ್ರೌರ್ಯದಿಂದ ಮೊಟ್ಟೆಗಳು ನಾಶಗೊಂಡು ಸಂತತಿ ಕ್ಷೀಣಿಸುತ್ತಿದೆ.

-ಮೊಬೈಲ್ ಫೋನ್ ಬಳಕೆ ವ್ಯಾಪಕವಾದುದರ ಪರಿಣಾಮ ನೆಟ್‌ವರ್ಕ್ ಕವರೇಜ್‌ಗಾಗಿ ಹಳ್ಳಿ ಹಳ್ಳಿಗಳಲ್ಲೂ, ಅರಣ್ಯ ಪ್ರದೇಶಗಳ ಮಧ್ಯೆಯೂ ಮೊಬೈಲ್ ಗೋಪುರಗಳು ಹೆಚ್ಚಾಗುತ್ತಾ ಅದರ ಪರಿಣಾಮ ಗುಬ್ಬಚ್ಚಿ ಸಂತತಿಗಳ ಮೇಲೆ ಬೀರುತ್ತಿದೆ. ಒಟ್ಟಿನಲ್ಲಿ ಹೆಚ್ಚುತ್ತಿರುವ ಸೂಕ್ಷ್ಮ ತರಂಗ ಗೋಪುರಗಳು ಗುಬ್ಬಚ್ಚಿ ಸಂತಾನಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ.

-ಗುಬ್ಬಚ್ಚಿಗಳ ಮುಖ್ಯ ಆಹಾರ ಹೊಲಗದ್ದೆಗಳಲ್ಲಿರುವ ಚಿಕ್ಕ ಪುಟ್ಟ ಕ್ರಿಮಿ ಕೀಟಗಳು ಮತ್ತು ಕಾಳುಗಳು. ಹೊಲಗದ್ದೆಗಳು ಕಡಿಮೆಯಾಗುತ್ತಾ ಅವುಗಳ ಆಹಾರ ಮೂಲಗಳ ಮೇಲೂ ಪರಿಣಾಮವುಂಟಾಯಿತು.

– ಗುಬ್ಬಚ್ಚಿಗಳು ತಮ್ಮ ಆಹಾರವನ್ನು ಹೊಲಗದ್ದೆಗಳಲ್ಲಿ ಹುಡುಕುವುದರಿಂದ ಹೊಲಗದ್ದೆಗಳಿಗೆ ಸಿಂಪಡಿಸುವ ಕ್ರಿಮಿ, ಕೀಟ ನಾಶಕಗಳು ಗುಬ್ಬಚ್ಚಿಗಳ ಪ್ರಾಣಕ್ಕೂ ಎರವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...