Homeಮುಖಪುಟ'ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ' - ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಜಮ್ಮು ಕಾಶ್ಮೀರದಿಂದ ಸಂವಿಧಾನವನ್ನು ಬೇರ್ಪಡಿಸಲು ಬಯಸುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ವಿಶ್ವದ ಯಾವುದೇ ಶಕ್ತಿಗೆ ಅಲ್ಲಿ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟುತ್ತಿದೆ, ಆದ್ದರಿಂದ ಜನರು ಒಗ್ಗಟ್ಟಾಗಿ ಇರಬೇಕೆಂದು ಎಚ್ಚರಿಸಿದ್ದಾರೆ.

ನವೆಂಬರ್ 20 ರ ವಿಧಾನಸಭಾ ಚುನಾವಣೆಗಾಗಿ ಮಹಾರಾಷ್ಟ್ರದಲ್ಲಿ ನಡೆಸಿದ ತನ್ನ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದಲಿತರು ಮತ್ತು ಆದಿವಾಸಿಗಳನ್ನು ಪ್ರಚೋದಿಸಲು ಇಂಡಿಯಾ ಒಕ್ಕೂಟವು ಖಾಲಿ ಪುಸ್ತಕಗಳನ್ನು ಸಂವಿಧಾನ ಎಂದು ತೋರ್ಪಡಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಕಾರ್ಯಸೂಚಿಯನ್ನು ಪ್ರೋತ್ಸಾಹಿಸಬಾರದು ಮತ್ತು ಪ್ರತ್ಯೇಕತಾವಾದಿಗಳ ಭಾಷೆಯಲ್ಲಿ ಮಾತನಾಡಬಾರದು ಎಂದು ಪ್ರಧಾನಿ ಹೇಳಿದ್ದಾರೆ. ಜನರ ಆಶೀರ್ವಾದ ಇರುವವರೆಗೂ ಈ ಕಾರ್ಯಸೂಚಿ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ 370ನೇ ವಿಧಿಯನ್ನು ವಾಪಸ್ ತರುವ ಕುರಿತು ನಿರ್ಣಯ ಮಂಡಿಸಿರುವ ಬಗ್ಗೆ ಮತ್ತು ಬಿಜೆಪಿ ಶಾಸಕರು ಪ್ರತಿಭಟಿಸಿದಾಗ ಅವರನ್ನು ಹೊರಹಾಕಿರುವ ಬಗ್ಗೆ ನೀವು ನೋಡಿದ್ದೀರಿ. ಇದನ್ನು ದೇಶ ಮತ್ತು ಮಹಾರಾಷ್ಟ್ರ ಅರ್ಥಮಾಡಿಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಜಾತಿ ಮತ್ತು ಸಮುದಾಯಗಳನ್ನು ವಿಭಜಿಸುವ ಅಪಾಯಕಾರಿ ಆಟವನ್ನು ಕಾಂಗ್ರೆಸ್ ಆಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಿಶ್ವದ ಯಾವುದೇ ಶಕ್ತಿಗೆ

ಎಸ್‌ಟಿ (ಪರಿಶಿಷ್ಟ ಪಂಗಡಗಳು), ಎಸ್‌ಸಿ (ಪರಿಶಿಷ್ಟ ಜಾತಿಗಳು) ಮತ್ತು ಒಬಿಸಿಗಳು (ಇತರ ಹಿಂದುಳಿದ ವರ್ಗಗಳು) ಒಗ್ಗಟ್ಟಾಗಿದ್ದರೆ ಕಾಂಗ್ರೆಸ್ ರಾಜಕೀಯ ಕೊನೆಗೊಳ್ಳುತ್ತದೆ. ಕಾಂಗ್ರೆಸ್ ಒಂದು ಜಾತಿಯನ್ನು ಮತ್ತೊಂದು ಜಾತಿಯ ವಿರುದ್ಧ ಎತ್ತಿಕಟ್ಟಲು ಮತ್ತು ಎಸ್‌ಸಿ, ST ಮತ್ತು OBC ಗಳ ಒಗ್ಗಟ್ಟನ್ನು ದುರ್ಬಲಗೊಳಿಸಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

“ನೆಹರೂ ಕಾಲದಿಂದಲೂ ಕಾಂಗ್ರೆಸ್ ಮತ್ತು ಅವರ ಕುಟುಂಬ ಮೀಸಲಾತಿಯನ್ನು ವಿರೋಧಿಸಿತು. ಈಗ ಅವರ ನಾಲ್ಕನೇ ತಲೆಮಾರಿನ ‘ಯುವರಾಜ’ ಜಾತಿ ವಿಭಜನೆಗಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಒಗ್ಗಟ್ಟಾಗಿದ್ದರೆ ನಾವು ಸುರಕ್ಷಿತವಾಗಿರುತ್ತೇವೆ. ಭಾರತ ವಿಭಜನೆಗೆ ಕಾರಣವಾದ ಧರ್ಮದ ಮೇಲೆ ಕಾಂಗ್ರೆಸ್ ರಾಜಕೀಯ ಮಾಡಿದೆ ಮತ್ತು ಈಗ ಪಕ್ಷವು ಜಾತಿ ರಾಜಕಾರಣದಲ್ಲಿ ತೊಡಗಿದೆ” ಎಂದು ಮೋದಿ ಆರೋಪಿಸಿದರು.

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯ ಚಕ್ರಗಳು ಮತ್ತು ಬ್ರೇಕ್‌ಗಳಿಲ್ಲದ ವಾಹನದಂತಾಗಿದೆ. ಡ್ರೈವರ್ ಸೀಟ್‌ನಲ್ಲಿ ಕುಳಿತುಕೊಳ್ಳಲು ಅಲ್ಲಿ ಜಗಳ ನಡೆಯುತ್ತಿದೆ ಎಂದು ಮೋದಿ ವ್ಯಂಗ್ಯವಾಡಿದರು.

ಇದನ್ನೂ ಓದಿ: ‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...