Homeಮುಖಪುಟ'ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ' - ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಜಮ್ಮು ಕಾಶ್ಮೀರದಿಂದ ಸಂವಿಧಾನವನ್ನು ಬೇರ್ಪಡಿಸಲು ಬಯಸುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ವಿಶ್ವದ ಯಾವುದೇ ಶಕ್ತಿಗೆ ಅಲ್ಲಿ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟುತ್ತಿದೆ, ಆದ್ದರಿಂದ ಜನರು ಒಗ್ಗಟ್ಟಾಗಿ ಇರಬೇಕೆಂದು ಎಚ್ಚರಿಸಿದ್ದಾರೆ.

ನವೆಂಬರ್ 20 ರ ವಿಧಾನಸಭಾ ಚುನಾವಣೆಗಾಗಿ ಮಹಾರಾಷ್ಟ್ರದಲ್ಲಿ ನಡೆಸಿದ ತನ್ನ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದಲಿತರು ಮತ್ತು ಆದಿವಾಸಿಗಳನ್ನು ಪ್ರಚೋದಿಸಲು ಇಂಡಿಯಾ ಒಕ್ಕೂಟವು ಖಾಲಿ ಪುಸ್ತಕಗಳನ್ನು ಸಂವಿಧಾನ ಎಂದು ತೋರ್ಪಡಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಕಾರ್ಯಸೂಚಿಯನ್ನು ಪ್ರೋತ್ಸಾಹಿಸಬಾರದು ಮತ್ತು ಪ್ರತ್ಯೇಕತಾವಾದಿಗಳ ಭಾಷೆಯಲ್ಲಿ ಮಾತನಾಡಬಾರದು ಎಂದು ಪ್ರಧಾನಿ ಹೇಳಿದ್ದಾರೆ. ಜನರ ಆಶೀರ್ವಾದ ಇರುವವರೆಗೂ ಈ ಕಾರ್ಯಸೂಚಿ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ 370ನೇ ವಿಧಿಯನ್ನು ವಾಪಸ್ ತರುವ ಕುರಿತು ನಿರ್ಣಯ ಮಂಡಿಸಿರುವ ಬಗ್ಗೆ ಮತ್ತು ಬಿಜೆಪಿ ಶಾಸಕರು ಪ್ರತಿಭಟಿಸಿದಾಗ ಅವರನ್ನು ಹೊರಹಾಕಿರುವ ಬಗ್ಗೆ ನೀವು ನೋಡಿದ್ದೀರಿ. ಇದನ್ನು ದೇಶ ಮತ್ತು ಮಹಾರಾಷ್ಟ್ರ ಅರ್ಥಮಾಡಿಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಜಾತಿ ಮತ್ತು ಸಮುದಾಯಗಳನ್ನು ವಿಭಜಿಸುವ ಅಪಾಯಕಾರಿ ಆಟವನ್ನು ಕಾಂಗ್ರೆಸ್ ಆಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಿಶ್ವದ ಯಾವುದೇ ಶಕ್ತಿಗೆ

ಎಸ್‌ಟಿ (ಪರಿಶಿಷ್ಟ ಪಂಗಡಗಳು), ಎಸ್‌ಸಿ (ಪರಿಶಿಷ್ಟ ಜಾತಿಗಳು) ಮತ್ತು ಒಬಿಸಿಗಳು (ಇತರ ಹಿಂದುಳಿದ ವರ್ಗಗಳು) ಒಗ್ಗಟ್ಟಾಗಿದ್ದರೆ ಕಾಂಗ್ರೆಸ್ ರಾಜಕೀಯ ಕೊನೆಗೊಳ್ಳುತ್ತದೆ. ಕಾಂಗ್ರೆಸ್ ಒಂದು ಜಾತಿಯನ್ನು ಮತ್ತೊಂದು ಜಾತಿಯ ವಿರುದ್ಧ ಎತ್ತಿಕಟ್ಟಲು ಮತ್ತು ಎಸ್‌ಸಿ, ST ಮತ್ತು OBC ಗಳ ಒಗ್ಗಟ್ಟನ್ನು ದುರ್ಬಲಗೊಳಿಸಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

“ನೆಹರೂ ಕಾಲದಿಂದಲೂ ಕಾಂಗ್ರೆಸ್ ಮತ್ತು ಅವರ ಕುಟುಂಬ ಮೀಸಲಾತಿಯನ್ನು ವಿರೋಧಿಸಿತು. ಈಗ ಅವರ ನಾಲ್ಕನೇ ತಲೆಮಾರಿನ ‘ಯುವರಾಜ’ ಜಾತಿ ವಿಭಜನೆಗಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಒಗ್ಗಟ್ಟಾಗಿದ್ದರೆ ನಾವು ಸುರಕ್ಷಿತವಾಗಿರುತ್ತೇವೆ. ಭಾರತ ವಿಭಜನೆಗೆ ಕಾರಣವಾದ ಧರ್ಮದ ಮೇಲೆ ಕಾಂಗ್ರೆಸ್ ರಾಜಕೀಯ ಮಾಡಿದೆ ಮತ್ತು ಈಗ ಪಕ್ಷವು ಜಾತಿ ರಾಜಕಾರಣದಲ್ಲಿ ತೊಡಗಿದೆ” ಎಂದು ಮೋದಿ ಆರೋಪಿಸಿದರು.

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯ ಚಕ್ರಗಳು ಮತ್ತು ಬ್ರೇಕ್‌ಗಳಿಲ್ಲದ ವಾಹನದಂತಾಗಿದೆ. ಡ್ರೈವರ್ ಸೀಟ್‌ನಲ್ಲಿ ಕುಳಿತುಕೊಳ್ಳಲು ಅಲ್ಲಿ ಜಗಳ ನಡೆಯುತ್ತಿದೆ ಎಂದು ಮೋದಿ ವ್ಯಂಗ್ಯವಾಡಿದರು.

ಇದನ್ನೂ ಓದಿ: ‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...