Homeಅಂತರಾಷ್ಟ್ರೀಯವಾವ್, ಮೋದಿ ವಿಶ್ವನಾಯಕ! ಹಾಗಂತ ಹೇಳಿದ ಸಂಸ್ಥೆ ಯಾವುದು ಗೊತ್ತೆ?

ವಾವ್, ಮೋದಿ ವಿಶ್ವನಾಯಕ! ಹಾಗಂತ ಹೇಳಿದ ಸಂಸ್ಥೆ ಯಾವುದು ಗೊತ್ತೆ?

- Advertisement -
- Advertisement -

| ಮಲ್ಲಿ |

ನಿನ್ನೆಯಿಂದ ವಿಶ್ವದ ಪ್ರಭಾವಿ ವ್ಯಕ್ತಿ ಯಾರು ಎಂಬ ಒಂದು ಮತದಾನ-ಸಮೀಕ್ಷೆಯ ಸುದ್ದಿ ಭಾರತದ ಸಾಮಾಜಿಕ ಜಾಲತಾಣ ಮತ್ತು ಬಿಜೆಪಿಯ ಭಾಗವೇ ಆಗಿರುವ ಕೆಲವು ಮೀಡಿಯಾ ಸಂಸ್ಥೆಗಳಲ್ಲಿ ಹರಿದಾಡುತ್ತಿದೆ. ‘ಅಂತರಾಷ್ಟ್ರೀಯ ಖ್ಯಾತಿಯ ‘ಬ್ರಿಟಿಷ್ ಹೆರಾಲ್ಡ್’ ನಡೆಸಿದ ಓದುಗರ ಅಭಿಪ್ರಾಯ ಸಮೀಕ್ಷೆಯಲ್ಲಿ ಮೋದಿ ಹೆಚ್ಚಿನ ಮತ ಪಡೆದು ವಿಶ್ವದ ಅತಿ ಜನಪ್ರಿಯ ನಾಯಕ ಆಗಿದ್ದಾರೆ’ ಎಂಬುದು ಅದರ ಸಾರಾಂಶ. ಅಂದಂತೆ ಯಾವುದೇ ನಿಯಂತ್ರಣ, ಉತ್ತರದಾಯಿತ್ವ ಇಲ್ಲದ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ಹಿರಿಯ ಸಚಿವರು, ನಾಯಕರು ಈ ಸುದ್ದಿ ಹರಡುತ್ತಿದ್ದಾರೆ ಎಂಬುದೇನೂ ಆಶ್ಚರ್ಯದ ವಿಷಯವಲ್ಲ. ಆದರೆ ಸಾರ್ವಜನಿಕರಿಗೆ, ಕನಿಷ್ಠ ತನ್ನ ವೀಕ್ಷಕ/ಗ್ರಾಹಕರಿಗೆ ಬದ್ಧರಾಗಬೇಕಿದ್ದ ರಿಪಬ್ಲಿಕ್ ಟಿವಿ, ಝೀ ನ್ಯೂಸ್ ಮತ್ತು ಆಜ್‍ತಕ್ ಮೀಡಿಯಾಗಳು ಇದು ಸತ್ಯ ಎಂಬಂತೆ ಯಾವ ಲಜ್ಜೆ, ಮಾನಮರ್ಯಾದೆ ಇಲ್ಲದೇ ಪ್ರಚಾರ ಮಾಡುತ್ತಿರುವುದು ನಾಚಿಕೆಗೇಡು.

ಅಲ್ಟ್ ನ್ಯೂಸ್ ಮತ್ತು ಇತರ ವಿಶ್ವಾಸಾರ್ಹ ಸಂಸ್ಥೆಗಳು ನಡೆಸಿದ ಫ್ಯಾಕ್ಟ್‍ ಚೆಕಿಂಗ್‍ನಲ್ಲಿ ಗೊತ್ತಾಗಿದ್ದೇನೆಂದರೆ ಈ ‘ಬ್ರಿಟಿಷ್ ಹೆರಾಲ್ಡ್’ ಎಂಬುದು ಪರಿಗಣನೆಗೆ ಇಲ್ಲದ ಒಂದು ವೈಬ್‍ಸೈಟ್ ಅಷ್ಟೇ. ಈ ಒಂದು ಅಂಶ ಓದಿದರೆ ಅದರ ಮಹತ್ವ ಗೊತ್ತಾಗುತ್ತದೆ: ಈ ಸಂಸ್ಥೆಯ ಟ್ವಿಟ್ಟರ್ ಗೆ ಇರುವ ಫಾಲೋವರ್ಸ್ ಕೇವಲ 400. ಆಲ್ಟ್ ನ್ಯೂಸ್ ಎಂಬ ಸಣ್ಣ ಮಟ್ಟದ ಸಂಸ್ಥೆಯ ಟ್ವಿಟ್ಟರ್ ಫಾಲೋವರ್ಸ್ 1,20,000ಕ್ಕೂ ಹೆಚ್ಚು. ಖ್ಯಾತ ದಿ ಗಾರ್ಡಿಯನ್ ಮತ್ತು ಬಿಬಿಸಿ ಟ್ವೀಟರ್ ಫಾಲೋವರ್ಸ್ ಸಂಖ್ಯೆ ಮಿಲಿಯನ್‍ಗಳ ಲೆಕ್ಕದಲ್ಲಿದೆ. ಅಂದರೆ 400 ಫಾಲೋವರ್ಸ್‍ಗಳಿರುವ ‘ಬ್ರಿಟಿಷ್ ಹೆರಾಲ್ಡ್’ ಎಂತಹ ‘ವಲ್ರ್ಡ್ ಫೇಮಸ್’ ಸಂಸ್ಥೆ ಮತ್ತು ಮ್ಯಾಗಜೀನ್ ಎಂಬುದು ಗೊತ್ತಾಗುತ್ತದೆ.

ಬ್ರಿಟಿಷ್ ‘ಬ್ರಿಟಿಷ್ ಹೆರಾಲ್ಡ್’ ಎಂಬುದೇ ಇಂತಹ ಪೇಯ್ಡ್ ನ್ಯೂಸ್ ಹರಡಲಿರುವ ವೆಬ್ ಸಂಸ್ಥೆ ಅಷ್ಠೇ, ನಮ್ಮಲ್ಲಿ ಪೋಸ್ಟ್ ಕಾರ್ಡ್ ಇದೆಯಲ್ಲ ಹಾಗೆ!

ಈ ಸುಳ್ಳು ಸುದ್ದಿಯನ್ನೇ ಚೆಕ್ ಮಾಡಲು ನಾವು ಹೋದರೆ, ಅದರ ಲಿಂಕ್ ಆ ಹೆಸರಿನ ಸಂಸ್ಥೆಗೆ ಹೋಗುತ್ತದೆ. ಅಲ್ಲಿ ಮೋದಿ ನಂಬರ್ 1 ಎಂಬ ಸುದ್ದಿಯೇ ಎದ್ದು ಕಾಣುತ್ತದೆ. ವೆಬ್ ಬಳಸುವ ಸುಕ್ಷಿತರು ಇದೇ ಸುದ್ದಿಯ ವಿಶ್ವಾಸಾರ್ಹತೆ ಎನ್ನುವಂತೆ ಇದನ್ನೆಲ್ಲ ಪ್ಲಾನು ಮಾಡಲಾಗಿದೆ. ಮೋದಿ-2 ಬಂದ ಮೇಲೆ, ಹಿಂದಿಗಿಂತ ಹೆಚ್ಚಾಗಿ ದೇಶದ ಪ್ರಚಲಿತ ಸಮಸ್ಯೆಗಳನ್ನು ಹಿನ್ನೆಲೆಗೆ ಸರಿಸಿ ಜನರು ಇಂತಹ ವಿಚಾರಗಳ ಚರ್ಚೆಯಲ್ಲಿ ಮುಳುಗುವಂತೆ ಮಾಡಲು ನಡೆಸುತ್ತಿರುವ ಹಲವು ತುಂಬಾ ವ್ಯವಸ್ಥಿತ ಕುತಂತ್ರಗಳಲ್ಲಿ ಇದೂ ಒಂದು.

ಬಿಜೆಪಿನ ತುತ್ತೂರಿಯಾಗಿರುವ ರಿಪಬ್ಲಿಕ್ ಟಿವಿ, ಆಜ್‍ತಕ್ ಮತ್ತು ಝೀ ನ್ಯೂಸ್‍ನಂತಹ ಮೋದಿ ಬಾಲಗಳು ಇದನ್ನು ಸಾಮಾಜಿಕ ಜಾಲತಾಣದ ಲೆವೆಲ್ಲಿನಲ್ಲೇ ಬಿಜೆಪಿ ಐಟಿ ಸೆಲ್ ಮಾಡುವ ನಿರ್ಲಜ್ಜ ಪ್ರಪಗಂಡಾದ ರೀತಿಯಲ್ಲೇ ಪ್ರಸಾರ ಮಾಡಿವೆ. ದೇಶದ ಮುಖ್ಯವಾಹಿನಿಯ ಯಾವ ಮೀಡಿಯಾವೂ ಇಂತಹ ಫೇಕ್‍ನ್ಯೂಸ್‍ಗೆ ಮಣೆ ಹಾಕಿಲ್ಲ ಎಂಬುದನ್ನು ಗಮನಿಸಿ.

ಅಂದಂತೆ ಮುಂದಿನ ಇಶ್ಯೂನಲ್ಲಿ ಡಿಟೇಲ್ಸ್ ಎಂದಿರುವ ‘‘ಬ್ರಿಟಿಷ್ ಹೆರಾಲ್ಡ್’ ಈ ಸಮೀಕ್ಷೆಯ ಸ್ವರೂಪವೇನು, ಅದನ್ನು ಯಾವ ಮಾದರಿಯಲ್ಲಿ ನಡೆಸಲಾಯಿತು ಎಂಬುದರ ಬಗ್ಗೆ ಯಾವ ವಿವರಣೆಯನ್ನು ನೀಡಿಲ್ಲ. ಹಿಂದೆಲ್ಲ ಬಿಜೆಪಿ ಭಕ್ತರು ಬಿಬಿಸಿ ಹೆಸರಲ್ಲಿ ಇಂತಹ ಸುದ್ದಿ ಮಾಡಿದಾಗ ಬಿಬಿಸಿ ಅಂತಹ ಯಾವ ಸರ್ವೆಯನ್ನೂ ನಾವು ಮಾಡುವುದಿಲ್ಲ ಎಂದು ಘೋಷಿಸಿ ಇವರ ಬಣ್ಣ ಬಯಲು ಮಾಡಿದ್ದರು. ಆದರೆ ವಿದೇಶ ಹೆಸರು ಇದ್ದರೆ ಭಾರತದ ಜನ ನಂಬುತ್ತಾರೆ ಎಂಬ ಕಾರಣದಿಂದ ಬ್ರಿಟಿಷ್ ರೀಡರ್ ಹೆಸರಲ್ಲಿ ಈ ದಂಧೆಯನ್ನು ಮಾಡಲಾಗಿದೆ.

ನಮ್ಮ ಪ್ರಧಾನಿಗಳು ವಿಶ್ವಶ್ರೇಷ್ಟರಾದರೆ ನಮಗೆ ಸಂತೋಷವೇ. ಆ ಮೂಲಕ ಭಾರತದ ಕೀರ್ತಿ ಪ್ರಪಂಚದಲ್ಲೆಡೆ ಹಬ್ಬಿ, ಭಾರತದಲ್ಲಿ ಹೂಡಿಕೆ ಹೆಚ್ಚಾಗಿ ಆರ್ಥಿಕ ಬೆಳವಣಿಗೆ, ಉದ್ಯೋಗಗಳ ಸಂಖ್ಯೆ ಹೆಚ್ಚಾದರೆ ನಮಗೂ ಖುಷಿಯೆ. ಆದರೆ ಸುಳ್ಳಿನ ಮೂಲಕ ಆಗಬಾರದು. ಆಗ ನಮ್ಮ ದೇಶದ ಮಾನ ಮರ್ಯಾದೆ ಹಾಳುತ್ತದೆ. ಆದರೆ ದುರಂತ ಎಂದರೆ ಈ ಸುಳ್ಳನ್ನು ಎಷ್ಟು ವ್ಯವಸ್ಥಿತವಾಗಿ ಹರಡುತ್ತಿದ್ದಾರೆಂದರೆ ಅದೀಗ ವ್ಯಾಟ್ಸಾಪ್‍ಗಳಲ್ಲಿ, ಪೇಸ್‍ಬುಕ್ ಪೇಜ್ ಗಳಲ್ಲಿ ಕನ್ನಡ ಸೇರಿದಂತೆ ಎಲ್ಲ ಭಾಷೆಗಳಲ್ಲಿ ಹರಿದಾಡುತ್ತಿದೆ. ಥೂ ಎಂತಹ ನಿರ್ಲಜ್ಜ ದಂಧೆಯಿದು!

(ಕೃಪೆ: ಆಲ್ಟ್ ನ್ಯೂಸ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. British herlad news get modi is world famous news if it is true or not But Narendra Modi Universal popular figure no doubt Becasuse Every Indian Nown Him .Because he named in the world .But India has nown in the world .in previous Days indian Prime Minister standing in the corner side in all world confernces But now Indidan Prime Minister is center Gravity all World Summits. Some pepole jealously criticiseing Him .But theyare in Gandhi and Neharu family slaves

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...