Homeಮುಖಪುಟ2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 150ನೇ ಸ್ಥಾನಕ್ಕೆ ಕುಸಿದ ಭಾರತ

2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 150ನೇ ಸ್ಥಾನಕ್ಕೆ ಕುಸಿದ ಭಾರತ

2021ರಲ್ಲಿ ಭಾರತದಲ್ಲಿ ಕನಿಷ್ಠ ಆರು ಪತ್ರಕರ್ತರನ್ನು ಕೊಲೆಗೈಯಲಾಗಿದೆ. 108 ಪತ್ರಕರ್ತರನ್ನು, 13 ಮಾಧ್ಯಮ ಸಂಸ್ಥೆಗಳನ್ನು ಟಾರ್ಗೆಟ್ ಮಾಡಲಾಗಿದೆ.

- Advertisement -
- Advertisement -

ರಿಪೋರ್ಟರ್ಸ್ ವಿತೌಟ್ ಬಾರ್ಡರ್ ಸಂಸ್ಥೆ ಪ್ರಕಟಿಸಿರುವ 2022ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತವು 150ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಭಾರತ 142ನೇ ಸ್ಥಾನ ಪಡೆದಿತ್ತು. ಆ ಮೂಲಕ ದೇಶದಲ್ಲಿ ಪತ್ರಕರ್ತರು ಅತಿ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬುದು ಬಹಿರಂಗವಾಗಿದೆ.

ವರದಿಯ ಪ್ರಕಾರ ನಾರ್ವೆ, ಡೆನ್ಮಾರ್ಕ್, ಸ್ವೀಡನ್ ಉತ್ತಮ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ಮೊದಲ ಮೂರು ರಾಷ್ಟ್ರಗಳಾಗಿವೆ. ಉತ್ತರ ಕೊರಿಯಾ (180), ಎರಿಟ್ರಿಯಾ (179), ಇರಾನ್ (178) ಕಡೆಯ ಮೂರು ಸ್ಥಾನ ಪಡೆದು ಕೆಟ್ಟ ಸ್ಥಿತಿಗೆ ಉದಾಹರಣೆಗಳಾಗಿವೆ.

ಭಾರತದಲ್ಲಿ ಪತ್ರಕರ್ತರ ಶೋಚನೀಯ ಸ್ಥಿತಿ

ಈ ವರ್ಷದ ಫೆಬ್ರವರಿಯಲ್ಲಿ ರೈಟ್ಸ್ ಅಂಡ್ ರಿಸ್ಕ್ ಅನಾಲಿಸಿಸ್ ಗ್ರೂಪ್ (ಆರ್‌ಆರ್‌ಎಜಿ) ಬಿಡುಗಡೆ ಮಾಡಿದ ಇಂಡಿಯಾ ಪ್ರೆಸ್ ಫ್ರೀಡಂ ವರದಿಯ ಪ್ರಕಾರ, 2021ರಲ್ಲಿ ಭಾರತದಲ್ಲಿ ಕನಿಷ್ಠ ಆರು ಪತ್ರಕರ್ತರನ್ನು ಒಂದೇ ವರ್ಷದಲ್ಲಿ ಕೊಲೆಗೈಯಲಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ತಲಾ ಇಬ್ಬರು ಪತ್ರಕರ್ತರು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಪತ್ರಕರ್ತರು ಕೊಲೆಯಾಗಿದ್ದಾರೆ. ಅಲ್ಲದೆ 108 ಪತ್ರಕರ್ತರನ್ನು, ಒಟ್ಟು 13 ಮಾಧ್ಯಮ ಸಂಸ್ಥೆಗಳನ್ನು ಟಾರ್ಗೆಟ್ ಮಾಡಲಾಗಿದೆ.

ಒಟ್ಟು 121 ಭಾರಿ ಪತ್ರಕರ್ತರ ಮೇಲೆ ದಾಳಿಗಳಾಗಿದ್ದು, ಅವುಗಳಲ್ಲಿ ಕನಿಷ್ಠ 34 ಪ್ರಕರಣಗಳು ರಾಜಕೀಯ ಪಕ್ಷಗಳು, ಪಕ್ಷಗಳ ಕಾರ್ಯಕರ್ತರು ಮತ್ತು ಮಾಫಿಯಾಗಳಿಂದ ನಡೆದಿವೆ. ಜಮ್ಮು ಮತ್ತು ಕಾಶ್ಮೀರ ಪ್ರಾಂತ್ಯದಲ್ಲಿ ಅತಿ ಹೆಚ್ಚು ಪತ್ರಕರ್ತರನ್ನು ಟಾರ್ಗೆಟ್‌ (25) ಮಾಡಲಾಗಿದೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ (23) ರಾಜ್ಯವಿದೆ.

2021ರಲ್ಲಿ 44 ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಅನೇಕ ಎಫ್‌ಐಆರ್‌ಗಳು ಆಗಿವೆ ಎಂಬುದನ್ನು ವರದಿ ತಿಳಿಸಿದೆ. 9 ಎಫ್‌ಐಆರ್‌ಗಳನ್ನು ದಾಖಲಿಸುವ ಮೂಲಕ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ. ಜಮ್ಮು- ಕಾಶ್ಮೀರ ಮತ್ತು ದೆಹಲಿ ಎರಡನೇ ಸ್ಥಾನದಲ್ಲಿವೆ.

ಇದನ್ನೂ ಓದಿ; ಇಂದು ಪತ್ರಿಕಾ ಸ್ವಾತಂತ್ರ್ಯ ದಿನ: ಪತ್ರಕರ್ತರ ನೋವಿನ ಕಥನ

ಸರ್ಕಾರವನ್ನು ಕಟುವಾಗಿ ಟೀಕಿಸಿ ವರದಿ ಮಾಡುತ್ತಿರುವ ನ್ಯೂಸ್‌ಲಾಂಡ್ರಿ, ದೈನಿಕ್ ಭಾಸ್ಕರ್, ಭಾರತ್ ಸಮಾಚಾರ್, ನ್ಯೂಸ್‌ಕ್ಲಿಕ್‌ನಂತಹ ಮಾಧ್ಯಮ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ರೈಡ್ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...