Homeಮುಖಪುಟವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

- Advertisement -
- Advertisement -

ರಾಜಕೀಯ ಸಂಘರ್ಷಗಳು, ಯುದ್ಧ ಮತ್ತು ಇನ್ನಿತರ ಕಾರಣಗಳಿಂದ ಮನೆ ಕಳೆದುಕೊಳ್ಳುವ, ತಮ್ಮ ಹುಟ್ಟಿದ ನೆಲ – ಊರುಗಳನ್ನು ಕಳೆದುಕೊಂಡು ನಿರಾಶ್ರಿತರಾಗುವ, ವಲಸೆ ಹೋಗಬೇಕಾಗಿ ಬರುವ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಅವರ ಬಗ್ಗೆ ಕರುಣೆ ಮತ್ತು ಗೌರವವನ್ನು ಬೆಳೆಸಿಕೊಳ್ಳಲು ತಿಳಿವು ಮೂಡಿಸಿ ಅನುವಾಗಲು ಜೂನ್ 20 ರಂದು ವಿಶ್ವಸಂಸ್ಥೆ ವಿಶ್ವ ನಿರಾಶ್ರಿತರ ದಿನವನ್ನಾಗಿ ಘೋಷಿಸಿದೆ.

ಈ ದಿನದಂದು ಕನ್ನಡದ ಕವಿ ಚಿದಂಬರ ನರೇಂದ್ರ ಅನುವಾದಿಸಿದ ಈ ಎರಡು ಕವಿತೆಗಳು ನಿಮ್ಮ ಓದಿಗೆ. ಈ ಕವನಗಳನ್ನು ಸಂಕಥನ ಪ್ರಕಟಿಸಿರುವ ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

ರೇಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
—————————-

1
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ .

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ
ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ

ಈ ರೆಫ್ಯೂಜಿ ಕ್ಯಾಂಪ್ ನಲ್ಲಿ.

2

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ
ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣು ಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

3

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್ ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ .

4

ಒಂದು ಟೆಂಟ್ ನಿಂದ
ಇನ್ನೊಂದು ಟೆಂಟ್ ಗೆ ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯ ತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಹಾಕುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ
ವಿಧಿಯಿಲ್ಲದೇ
ಕುದಿಯುತ್ತಿರುವ ಕೇಸರಿ
ವಧುವಿನ ಮೊದಲರಾತ್ರಿ.

ಮೂಲ: ಕಲ್ಪನಾ ಸಿಂಗ್

_______________________________________________

ನನ್ನ ಮಗಳು,
ಅವಳ ಸೈಕಲ್ ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇ ತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.

ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಮೂಲ: ಫಾದಿ ಜುಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...