Homeಮುಖಪುಟವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

- Advertisement -
- Advertisement -

ರಾಜಕೀಯ ಸಂಘರ್ಷಗಳು, ಯುದ್ಧ ಮತ್ತು ಇನ್ನಿತರ ಕಾರಣಗಳಿಂದ ಮನೆ ಕಳೆದುಕೊಳ್ಳುವ, ತಮ್ಮ ಹುಟ್ಟಿದ ನೆಲ – ಊರುಗಳನ್ನು ಕಳೆದುಕೊಂಡು ನಿರಾಶ್ರಿತರಾಗುವ, ವಲಸೆ ಹೋಗಬೇಕಾಗಿ ಬರುವ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಅವರ ಬಗ್ಗೆ ಕರುಣೆ ಮತ್ತು ಗೌರವವನ್ನು ಬೆಳೆಸಿಕೊಳ್ಳಲು ತಿಳಿವು ಮೂಡಿಸಿ ಅನುವಾಗಲು ಜೂನ್ 20 ರಂದು ವಿಶ್ವಸಂಸ್ಥೆ ವಿಶ್ವ ನಿರಾಶ್ರಿತರ ದಿನವನ್ನಾಗಿ ಘೋಷಿಸಿದೆ.

ಈ ದಿನದಂದು ಕನ್ನಡದ ಕವಿ ಚಿದಂಬರ ನರೇಂದ್ರ ಅನುವಾದಿಸಿದ ಈ ಎರಡು ಕವಿತೆಗಳು ನಿಮ್ಮ ಓದಿಗೆ. ಈ ಕವನಗಳನ್ನು ಸಂಕಥನ ಪ್ರಕಟಿಸಿರುವ ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

ರೇಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
—————————-

1
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ .

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ
ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ

ಈ ರೆಫ್ಯೂಜಿ ಕ್ಯಾಂಪ್ ನಲ್ಲಿ.

2

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ
ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣು ಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

3

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್ ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ .

4

ಒಂದು ಟೆಂಟ್ ನಿಂದ
ಇನ್ನೊಂದು ಟೆಂಟ್ ಗೆ ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯ ತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಹಾಕುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ
ವಿಧಿಯಿಲ್ಲದೇ
ಕುದಿಯುತ್ತಿರುವ ಕೇಸರಿ
ವಧುವಿನ ಮೊದಲರಾತ್ರಿ.

ಮೂಲ: ಕಲ್ಪನಾ ಸಿಂಗ್

_______________________________________________

ನನ್ನ ಮಗಳು,
ಅವಳ ಸೈಕಲ್ ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇ ತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.

ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಮೂಲ: ಫಾದಿ ಜುಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...