Homeಮುಖಪುಟವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

- Advertisement -
- Advertisement -

ರಾಜಕೀಯ ಸಂಘರ್ಷಗಳು, ಯುದ್ಧ ಮತ್ತು ಇನ್ನಿತರ ಕಾರಣಗಳಿಂದ ಮನೆ ಕಳೆದುಕೊಳ್ಳುವ, ತಮ್ಮ ಹುಟ್ಟಿದ ನೆಲ – ಊರುಗಳನ್ನು ಕಳೆದುಕೊಂಡು ನಿರಾಶ್ರಿತರಾಗುವ, ವಲಸೆ ಹೋಗಬೇಕಾಗಿ ಬರುವ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಅವರ ಬಗ್ಗೆ ಕರುಣೆ ಮತ್ತು ಗೌರವವನ್ನು ಬೆಳೆಸಿಕೊಳ್ಳಲು ತಿಳಿವು ಮೂಡಿಸಿ ಅನುವಾಗಲು ಜೂನ್ 20 ರಂದು ವಿಶ್ವಸಂಸ್ಥೆ ವಿಶ್ವ ನಿರಾಶ್ರಿತರ ದಿನವನ್ನಾಗಿ ಘೋಷಿಸಿದೆ.

ಈ ದಿನದಂದು ಕನ್ನಡದ ಕವಿ ಚಿದಂಬರ ನರೇಂದ್ರ ಅನುವಾದಿಸಿದ ಈ ಎರಡು ಕವಿತೆಗಳು ನಿಮ್ಮ ಓದಿಗೆ. ಈ ಕವನಗಳನ್ನು ಸಂಕಥನ ಪ್ರಕಟಿಸಿರುವ ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

ರೇಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
—————————-

1
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ .

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ
ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ

ಈ ರೆಫ್ಯೂಜಿ ಕ್ಯಾಂಪ್ ನಲ್ಲಿ.

2

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ
ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣು ಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

3

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್ ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ .

4

ಒಂದು ಟೆಂಟ್ ನಿಂದ
ಇನ್ನೊಂದು ಟೆಂಟ್ ಗೆ ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯ ತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಹಾಕುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ
ವಿಧಿಯಿಲ್ಲದೇ
ಕುದಿಯುತ್ತಿರುವ ಕೇಸರಿ
ವಧುವಿನ ಮೊದಲರಾತ್ರಿ.

ಮೂಲ: ಕಲ್ಪನಾ ಸಿಂಗ್

_______________________________________________

ನನ್ನ ಮಗಳು,
ಅವಳ ಸೈಕಲ್ ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇ ತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.

ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಮೂಲ: ಫಾದಿ ಜುಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...