Homeಮುಖಪುಟವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು

- Advertisement -
- Advertisement -

ರಾಜಕೀಯ ಸಂಘರ್ಷಗಳು, ಯುದ್ಧ ಮತ್ತು ಇನ್ನಿತರ ಕಾರಣಗಳಿಂದ ಮನೆ ಕಳೆದುಕೊಳ್ಳುವ, ತಮ್ಮ ಹುಟ್ಟಿದ ನೆಲ – ಊರುಗಳನ್ನು ಕಳೆದುಕೊಂಡು ನಿರಾಶ್ರಿತರಾಗುವ, ವಲಸೆ ಹೋಗಬೇಕಾಗಿ ಬರುವ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಅವರ ಬಗ್ಗೆ ಕರುಣೆ ಮತ್ತು ಗೌರವವನ್ನು ಬೆಳೆಸಿಕೊಳ್ಳಲು ತಿಳಿವು ಮೂಡಿಸಿ ಅನುವಾಗಲು ಜೂನ್ 20 ರಂದು ವಿಶ್ವಸಂಸ್ಥೆ ವಿಶ್ವ ನಿರಾಶ್ರಿತರ ದಿನವನ್ನಾಗಿ ಘೋಷಿಸಿದೆ.

ಈ ದಿನದಂದು ಕನ್ನಡದ ಕವಿ ಚಿದಂಬರ ನರೇಂದ್ರ ಅನುವಾದಿಸಿದ ಈ ಎರಡು ಕವಿತೆಗಳು ನಿಮ್ಮ ಓದಿಗೆ. ಈ ಕವನಗಳನ್ನು ಸಂಕಥನ ಪ್ರಕಟಿಸಿರುವ ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

ರೇಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
—————————-

1
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ .

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ
ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ

ಈ ರೆಫ್ಯೂಜಿ ಕ್ಯಾಂಪ್ ನಲ್ಲಿ.

2

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ
ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣು ಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

3

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್ ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ .

4

ಒಂದು ಟೆಂಟ್ ನಿಂದ
ಇನ್ನೊಂದು ಟೆಂಟ್ ಗೆ ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯ ತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಹಾಕುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ
ವಿಧಿಯಿಲ್ಲದೇ
ಕುದಿಯುತ್ತಿರುವ ಕೇಸರಿ
ವಧುವಿನ ಮೊದಲರಾತ್ರಿ.

ಮೂಲ: ಕಲ್ಪನಾ ಸಿಂಗ್

_______________________________________________

ನನ್ನ ಮಗಳು,
ಅವಳ ಸೈಕಲ್ ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇ ತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.

ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಮೂಲ: ಫಾದಿ ಜುಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...