Homeಅಂಕಣಗಳುವಿಶ್ವ ಸಿದ್ದೇಶ್ವರರು ತ್ರಿಮತಸ್ಥರಂತೆ ಕಂಗೊಳಿಸಿದರಂತಲ್ಲಾ

ವಿಶ್ವ ಸಿದ್ದೇಶ್ವರರು ತ್ರಿಮತಸ್ಥರಂತೆ ಕಂಗೊಳಿಸಿದರಂತಲ್ಲಾ

- Advertisement -
- Advertisement -

ಭಾರತಕ್ಕೆ ವಕ್ಕರಿಸಿರುವ, ಮೋದಿ ಶಾ ಎಂಬ ಕರಟಕ ದಮನಕರಿಂದ ಇಡೀ ಭಾರತದ ಮನೆಯ ನೆಮ್ಮದಿಯೇ ಹಾಳಾಗಿದೆಯಂತಲ್ಲಾ. ಅದು ಸಹಜ. ಮನೆಯ ಒಬ್ಬ ಸದಸ್ಯನ ತಲೆ ಕೆಟ್ಟರೆ ಆತ ಯಾವ ಸಮಯದಲ್ಲಿ ಏನು ಮಾಡುತ್ತಾನೋ ಎಂದು ಹೆದರಿದ ಮನೆಯ ಸದಸ್ಯರು ಕ್ಷೋಭೆಗೆ ತುತ್ತಾಗಿರುತ್ತಾರೆ. ಆದರೆ ಎರಡು ಜನ ತಲೆಕೆಟ್ಟವರಿದ್ದರೆ ಕತೆಯೇನು? ಇಂತದ್ದೊಂದು ಸ್ಥಿತಿಯನ್ನು ಭಾರತಾಂಬೆಯ ಅವಿಭಕ್ತ ಕುಟುಂಬ ಎದರಿಸುತ್ತಿದೆ. ಅಚ್ಚರಿಯ ಸಂಗತಿ ಎಂದರೆ ತಲೆಕೆಟ್ಟ ಗಿರಾಕಿಗಳೇ ಮನೆಯ ಯಜಮಾನರುಗಳಾಗಿರುವುದು. ಒಮ್ಮೊಮ್ಮೆ ಅವನಾಡುವ ಮಾತನ್ನು ಇವನಾಡುತ್ತಾನೆ, ಇವನ ಮಾತನ್ನು ಅವನಾಡುತ್ತಾನೆ. ಯಾರು ಯಾವ ಮಾತನ್ನಾಡಬಾರದೊ ಅವರೇ ಆಡುತ್ತಾ ಭಾರತವನ್ನೆ ಅತಂತ್ರಕ್ಕೆ ದೂಡಿಬಿಟ್ಟಿದ್ದಾರೆ. ಇದರಿಂದ ಭಾರತದ ಸಮಸ್ತ ಜನಕೋಟಿಯೇ ಆತಂಕಕ್ಕೀಡಾಗಿದೆ. ಆದರೆ ಈ ಪೈಕಿ ಬಿಜೆಪಿಯಲ್ಲಿ ಆಶ್ರಯ ಪಡೆದಿರುವ ಜನ ಮಾತ್ರ ಯಂಥದೋ ಖುಷಿಯಿಂದ ಕೇಕೆ ಹಾಕುತ್ತಿವೆ. ಸೂಕ್ಷ್ಮವಾಗಿ ನೋಡಿದರೆ ಕರಟಕ ದಮನಕರ ಮನಸ್ಥಿತಿ ಇವರಿಗೂ ಆವರಿಸಿರುವ ಕಾರಣಕ್ಕೇ ಈ ಕೇಕೆಯಂತಲ್ಲಾ ಥೂತ್ತೇರಿ….

ಕೃಷ್ಣ ಭಗವಧ್ಗೀತೆಯ ಹೊರಗೂ ಒಂದು ಮಾತನ್ನಾಡಿದ್ದಾನೆ. ದುರ್ಯೋಧನನಿಂದ ಇಡೀ ಕುರುವಂಶವೇ ಯುದ್ಧ ಎದುರಿಸಿ, ನಾಶವಾಗುವುದರ ಬದಲು ದುರ್ಯೋಧನನನ್ನೇ ನಿಯಂತ್ರಿಸಿದರೆ ಹೇಗೆ? ಅಂದರೆ, ಒಂದು ದೇಶ ಉಳಿಸುವ ಸಲುವಾಗಿ ಒಂದು ಗ್ರಾಮವನ್ನು ಬಲಿಕೊಡಬೇಕಾಗಿ ಬಂದರೆ ಹಿಂದೆ ಮುಂದೆ ನೋಡಬಾರದು, ಹಾಗೆಯೇ ಒಂದು ಊರನ್ನ ಉಳಿಸಬೇಕಾದರೆ ಒಂದು ಕುಟುಂಬದ ಬಲಿಯ ಅಗತ್ಯಬಿದ್ದರೆ, ಕನಿಕರ ಒಳ್ಳೆಯದಲ್ಲ. ಅದರಂತೆ ಒಂದು ಕುಟುಂಬದ ಉಳುವಿಗಾಗಿ ಒಬ್ಬ ವ್ಯಕ್ತಿಯ ಬಲಿ ಅನಿವಾರ್ಯವಾದರೆ ಬಲಿಕೊಡಲೇಬೇಕು ಎಂದು ಕೃಷ್ಣ ಹೇಳಿದ್ದಾನೆ, ಆದರೆ, ಇದು ಕತೆಯಾಯಿತು. ಭಾರತದ ಸಂವಿಧಾನದ ರೀತ್ಯ ಚುನಾವಣೆಯಲ್ಲಿ ಆರಿಸಿ ಬಂದು ಪ್ರಧಾನಿಯಾದವ, ತನ್ನನ್ನು ಆರಿಸಿದ ಎಂ.ಪಿ.ಗಳ ಬೀಜವನೇ ಎಗರಿಸಿ ಸೀಡ್‍ಲೆಸ್ ಎಂಪಿಗಳನ್ನಾಗಿಸಿದ್ದಾನೆ. ಧಿಕ್ಕಾರ ಕೂಗಿದವನನ್ನೇ ಜೈಲಿಗೆ ಹಾಕುತ್ತೇನೆ ಎನ್ನುತ್ತಿದ್ದಾನೆ. ಅಂತೂ ಆತನ ಹುಲಿ ಸವಾರಿಗೊಂದು ಅಂತ್ಯ ಬರಬೇಕಾದರೆ ಮತ್ತೆ ಚುನಾವಣೆ ಬರಬೇಕು. ಆದರೆ ಅದೂ ಭಯ, ಏಕೆಂದರೆ ಕರ್ನಾಟಕದ ಜನತಾ ಜನಾರ್ಧನ ಅನರ್ಹರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾನಲ್ಲಾ ಥೂತ್ತೇರಿ…

ಇದ್ದುದರಲ್ಲಿ ಹುಣಸೂರಿನ ಜನ ಅನರ್ಹ ವಿಶ್ವನಾಥರನ್ನ ಸೋಲಿಸಿ, ತಕ್ಕ ಉತ್ತರ ಕೊಟ್ಟಿದ್ದಾರಂತಲ್ಲಾ. ತನ್ನ ಸೋಲಿಗೆ ಸಿದ್ದು ಕಾರಣ ಎಂದು ಹೇಳಿದ ವಿಶ್ವನಾಥ್ ಮೊನ್ನೆ ದೊಡ್ಡಕೊಪ್ಪಲಿನಲ್ಲಿ ಸಿದ್ದುವನ್ನು ಮಧ್ಯಕ್ಕೆ ಕೂರಿಸಿಕೊಂಡು ಆಕಡೆಗೆ ಈಶ್ವರಪ್ಪನನ್ನು ಸ್ಥಾಪಿಸಿಕೊಂಡು ಬ್ರಾಹ್ಮಣ ಸಮಾಜದ ತ್ರಿಮತಸ್ಥರಂತೆ ವಿರಾಜಮಾನರಾಗಿದ್ದು ನೋಡಿದ ದೊಡ್ಡಕೊಪ್ಪಲ ಕುರುಬರ ಕಣ್ಣಲ್ಲಿ ಆನಂದ ಭಾಷ್ಪಾ ಹರಿದು ಹೋದವಂತಲ್ಲಾ. ಕರ್ನಾಟಕದ ಬ್ರಾಹ್ಮಣ ಸಮಾಜದ ರಾಜಕಾರಣಿಗಳು, ತ್ರಿಮತಸ್ಥರು ಒಂದಾದರೆ ಅದೆಷ್ಟು ಚಂದ, ಮತ್ತೆ ಪುರೋಹಿತಶಾಹಿ ಕಾಲ ಮರುಕಳಿಸುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹರಸಾಹಸ ಪಡುತ್ತಿರಬೇಕಾದರೆ ಕುರುಬ ಕುಲದ ತ್ರಿಮತಸ್ಥರಂತೆ ಕಾಣುವ ಸಿದ್ದು ವಿಶ್ವ ಈಶ್ವರ ಬಾಡಿನೂಟಕ್ಕೆ ಸೇರಿದ ಬಾಡು ಒಕ್ಕರಂತೆ ಒಂದೇ ಮೈಕಿನಿಂದ ಪರಸ್ಪರ ಹಿಗ್ಗಾಮುಗ್ಗಾ ಹೊಗಳಿಕೊಂಡರಲ್ಲಾ. ಹಾಗೆ ನೋಡಿದರೆ, ಈ ಮೂವರು ತ್ರಿಮತಸ್ಥರೆಂಬುದರಲ್ಲಿ ಯಾವ ಸಂಶಯವೂ ಇಲ್ಲ. ಮನೋಗತದಲ್ಲಿ ಕುಲಾಚರಣೆಯಲ್ಲಿ ಪ್ರತಿನಿಧಿಸುವ ಪಾರ್ಟಿ ವಿಷಯದಲ್ಲೂ ಇವರು ತ್ರಿಮತಸ್ಥರಂತಲ್ಲಾ ಥೂತ್ತೇರಿ…

ಬ್ರಾಹ್ಮಣ ತ್ರಿಮತಸ್ಥರು ಒಂದಾಗುವ ಅಗತ್ಯವಿಲ್ಲ. ಏಕೆಂದರೆ ಪುರೋಹಿತಶಾಹಿ ಚಿಹ್ನೆಯಾದ ಬೆಲ್ಟು ಅವರನ್ನೆಲ್ಲಾ ಬಂಧಿಸಿದೆ. ಅವರ ಯೋಗಕ್ಷೇಮವನ್ನು ಆರೆಸೆಸ್ಸ್ ನೋಡಿಕೊಳ್ಳುತ್ತಿದೆ. ಆದರೆ ಕುರುಬರಿಗೆ ಅಂತ ಬೆಲ್ಟೇ ಇಲ್ಲ. ವಿಶ್ವನಾಥ ಮತ ಕೆದಕಿದರೆ ಕಾಂಗ್ರೆಸ್ ಮನೆ ಇತಿಹಾಸ ಹೇಳುತ್ತಾರೆ. ಸಿದ್ದು ಕುಲಕೇಳಿದರೆ ಜನತಾದಳದ ಮನೆಬಿಟ್ಟು ಬಂದ ಅಗಲಿಕೆ ವಾಸನೆ ಇನ್ನೂ ಇದೆ. ಈ ಪೈಕಿ ಈಶ್ವರಪ್ಪ ಮಾತ್ರ ಹೆಸರಿಗೆ ಕುರುಬ ಅಷ್ಟೇ, ಆತನ ಮಾತು ಮನಸ್ಸು ಚಡ್ಡಿಮಯವಾಗಿದೆ. ಅದಕ್ಕೆ ಉಡುಪಿಯಲ್ಲಿ ಕನಕ ಗೋಪುರವೇ ಇರಲಿಲ್ಲ ಎಂದುದಲ್ಲದೆ, ಅಧಿಕಾರ ಇರಲಿ ಇಲ್ಲದಿರಲಿ ಆತ ಮಾಡುವ ಕೆಲಸದಲ್ಲಿ ಮೊದಲನೆಯದು ಬ್ರಾಹ್ಮಣರ ಪರಿಚಾರಿಕೆ. ನಂತರ ಲಿಂಗಾಯಿತರದ್ದು. ಉಳಿದಂತೆ ಮರೆಯಲ್ಲಿ ಕುರುಬರದ್ದು. ಸಾರ್ವಜನಿಕವಾಗಿ ಖಂಡನೆ, ಹೀಯಾಳಿಕೆ ಮೂದಲಿಕೆ ಮಾತುಗಳನ್ನಾಡಿದರೂ ಕೂಡ, ದೊಡ್ಡಕೊಪ್ಪಲ ಮೈದಾನದಲಿ ವಿಶ್ವಸಿದ್ದೇಶ್ವರರ ಸಮಾಗಮ ನೋಡಿದ ಒಕ್ಕಲಿಗರು “ನೋಡಿರ್ಲ ಅವುರ್ಯಂಗೆ ಒಂಥಾಯಿ ಮಕ್ಕಳಂಗೆ ಕುಂತವರೆ! ನಮ್ಮದ್ಯಾವೇಗೌಡ ಜೀವಮಾನದಲ್ಲಿ ಹಿಂಗೆ ನಮ್ಮ ಜಾತಿ ಲೀಡ್ರು ಜತೆ ಕುಂತಿದ್ದ ನೋಡಕ್ಕಾಗಲೇಯಿಲವಲ್ಲಾ” ಎಂದು ಹಲುಬಿದರಂತಲ್ಲಾ. ಥೂತ್ತೇರಿ..

ಮೊನ್ನೆ ಮೊನ್ನೆಯವರೆಗೆ ಒಂದೇ ತಂದೆಯ ಮಕ್ಕಳಂತೆ ಕಂಗೊಳಿಸಿದ್ದ ಕುಮಾರಣ್ಣ ಮತ್ತು ಈಶ್ವರಣ್ಣ ಕೋಳಿಗಳಂತೆ ಜಗಳಕ್ಕೆ ಬಿದ್ದಿದ್ದಾರಲ್ಲಾ, ಇದನ್ನೇನು ಗಂಭೀರವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಈಶ್ವರಪ್ಪ ಸಿದ್ದು ಜಗಳ ಮತ್ತು ವಿಶ್ವನಾಥ್ ಸಿದ್ದು ಫೈಟಿಂಗ್ ನೋಡಿದವರಿಗೆ ಮೊನ್ನೆ ನಡೆದ ದೊಡ್ಡಕೊಪ್ಪಲ ಸಭೆ ನೆನಪಿಸಿಕೊಂಡರೆ ಸಾಕು, ಈ ನಟಸಾರ್ವಭೌಮರ ಜಗಳ ನಟನೆಯೆಂಬುದು ಸಾಬೀತಾಗಿದೆ. ಇದೇ ಈಶ್ವರಪ್ಪ 2013ರ ಚುನಾವಣೆಯಲ್ಲಿ `ನಿಮ್ಮ ಜೆಡಿಎಸ್ ಅಭ್ಯರ್ಥಿ ಶಿವಮೊಗ್ಗದಲ್ಲಿ ತೊಡಕಾಗಿದ್ದಾನೆ’ ಎಂದು ಕುಮಾರಣ್ಣನಿಗೆ ಫೋನ್ ಮಾಡಿದಾಗ, ಕುಮಾರಣ್ಣ “ಆಯ್ತು ಬ್ರದರ್ ಹೆದರಬೇಡಿ” ಎಂದು ಆಶ್ವಾಸನೆ ಕೊಟ್ಟ ಮರುದಿನದಿಂದಲೇ ಜೆ.ಡಿ.ಎಸ್ ಕ್ಯಾಂಡಿಡೇಟ್ ಶ್ರೀಕಾಂತ್ ಕೈಗೆ ಯಾವ ಕಾರ್ಯಕರ್ತರೂ ಸಿಗಲಿಲ್ಲ. ಆದರೇನು ಲಿಂಗಾಯಿತರು ಈಶ್ವರಪ್ಪನನ್ನ ಮಗ್ಗ ಮಲಗಿಸಿದ್ದರು. ಆಪತ್ಕಾಲದಲ್ಲಿ ಸಹಾಯ ಮಾಡುವ ಕುಮಾರಣ್ಣನೇ ಈಗ `ಈಶ್ವರಪ್ಪನ ನಾಲಿಗೆ ಇರಬೇಕಾದ ಜಾಗದಲ್ಲಿ ಇರಬೇಕು’ ಎಂದಿದ್ದಾರಲ್ಲಾ. ವಿಶ್ವನಾಥ್ ಸಿದ್ದು ಜಗಳದ ಎದುರು ಇದ್ಯಾವ ಮಹಾ ಅಂತೀರಾ ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...