Homeಅಂತರಾಷ್ಟ್ರೀಯಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು...

ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಯನ್ನು ನಿಲ್ಲಿಸುವಂತೆ ಯುಎನ್ ಸೆಕ್ಯುರಿಟಿ ಕೌನ್ಸಿಲ್ (ಯುಎನ್‌ಎಸ್‌ಸಿ) ಮಂಡಿಸಿದ ಕರಡು ನಿರ್ಣಯವನ್ನು ಮತ್ತೊಮ್ಮೆ ವೀಟೋ ಅಧಿಕಾರವನ್ನು ಬಳಕೆ ಮಾಡುವ ಮೂಲಕ ಅಮೆರಿಕ ತಡೆದಿದ್ದು, ಇದಕ್ಕೆ ಮಿತ್ರರಾಷ್ಟ್ರಗಳು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಖಂಡನೆ ವ್ಯಕ್ತವಾಗಿದೆ.

ಗಾಝಾದಲ್ಲಿ ಕದನ ವಿರಾಮವನ್ನು ಒತ್ತಾಯಿಸುವ ಯುಎನ್‌ಎಸ್‌ಸಿ ಮಂಡಿಸಿದ ಮೂರನೇ ನಿರ್ಣಯವನ್ನು ಕೂಡ ಅಮೆರಿಕ ವಿಟೋ ಅಧಿಕಾರವನ್ನು ಬಳಸಿ ತಡೆದಿದೆ. ಇದು ಅಮೆರಿಕಾದ ಅಮಾನವೀಯ ಕೃತ್ಯ, ಇಸ್ರೇಲ್‌ ನಡೆಸುತ್ತಿರುವ ನರಮೇಧಕ್ಕೆ ಅಮೆರಿಕಾ ಪಾಲುದಾರವಾಗಿದೆ ಎಂದು ವಿಶ್ವದ ಬಹುತೇಖ ರಾಷ್ಟ್ರಗಳು ಖಂಡನೆಯನ್ನು ವ್ಯಕ್ತಪಡಿಸಿದೆ.

ಅಮೆರಿಕ ನಿನ್ನೆ ಪ್ಯಾಲೆಸ್ತೀನ್‌ ಎನ್‌ಕ್ಲೇವ್‌ನಿಂದ ಎಲ್ಲಾ ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ತಾತ್ಕಾಲಿಕ ಕದನ ವಿರಾಮವನ್ನು ಬೆಂಬಲಿಸುವ ನಿರ್ಣಯವನ್ನು ಬೆಂಬಲಿಸಿತ್ತು. ಇದರ ಬೆನ್ನಲ್ಲಿ ಅಮೆರಿಕ ಮತ್ತೆ ಉಲ್ಟಾ ಹೊಡೆದಿದೆ. ಗಾಝಾದಲ್ಲಿ 29,000ಕ್ಕೂ ಅಧಿಕ ಜನರ ಹತ್ಯೆಯ ಬೆನ್ನಲ್ಲಿ ಸಂಘರ್ಷವನ್ನು ಕೊನೆಗೊಳಿಸಲು ಜಗತ್ತಿನಾದ್ಯಂತದ ದೇಶಗಳು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದೆ. ಯುಎನ್‌ ‘ಕದನ ವಿರಾಮ’ದ ಕುರಿತ ನಿರ್ಣಯಕ್ಕೆ 15-ಸದಸ್ಯ ಮಂಡಳಿಯಲ್ಲಿನ ಮತವು 13-1 ಆಗಿದ್ದು, ಯುನೈಟೆಡ್ ಕಿಂಗ್‌ಡಮ್ ಮತಗಳಿಂದ ದೂರ ಉಳಿದಿತ್ತು. ಅಮೆರಿಕಾ ವೀಟೋ ಅಧಿಕಾರವನ್ನು ಬಳಸಿ ನಿರ್ಣಯಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಅಮೆರಿಕ ನಡೆಗೆ ಚೀನಾ ವಿರೋಧ:

ಯುಎಸ್‌ ಕದನ ವಿರಾಮವನ್ನು ಬೆಂಬಲಿಸದ ಹಿನ್ನೆಲೆ, ಚೀನಾದ ರಾಯಭಾರಿ ಜಾಂಗ್ ಜುನ್, ಯುಎಸ್‌ ಬಗ್ಗೆ ಬಲವಾದ ನಿರಾಶೆ ಮತ್ತು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಯುಎಸ್‌ನ ವೀಟೋ ತಪ್ಪು ಸಂದೇಶವನ್ನು ಕಳುಹಿಸುತ್ತದೆ, ಗಾಝಾದಲ್ಲಿನ ಪರಿಸ್ಥಿತಿಯನ್ನು ಹೆಚ್ಚು ಅಪಾಯಕಾರಿ ಸ್ಥಿತಿಗೆ ತಳ್ಳುತ್ತದೆ ಎಂದು ಜಾಂಗ್ ಹೇಳಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಆಕ್ಷೇಪಣೆಯು ಮುಂದುವರಿದ ಹತ್ಯೆಗೆ ಹಸಿರು ನಿಶಾನೆ ತೋರುವುದಕ್ಕಿಂತ ಭಿನ್ನವಾಗಿಲ್ಲ. ಗಾಝಾದಲ್ಲಿನ ಯುದ್ಧವನ್ನು ತಡೆಯುವ ಮೂಲಕ  ಮಾತ್ರ ಇಡೀ ಪ್ರದೇಶವನ್ನು ಆವರಿಸಿರುವ ನರಕದ ಬೆಂಕಿಯನ್ನು ಜಗತ್ತು ತಡೆಯಬಹುದು ಎಂದು ಚೀನಾ ಹೇಳಿದೆ.

ರಷ್ಯಾ 

ಗಾಝಾದಲ್ಲಿ ಕದನ ವಿರಾಮಕ್ಕೆ ಯುಎಸ್ ವೀಟೋ ಅಧಿಕಾರವನ್ನು ಬಳಕೆ ಮಾಡಿ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಕ್ಕೆ ರಷ್ಯಾದ ರಾಯಭಾರಿ ವಾಸಿಲಿ ನೆಬೆಂಜಿಯಾ ಅವರು ಯುಎಸ್ ವೀಟೋ ಅಧಿಕಾರ ಬಳಕೆ ಭದ್ರತಾ ಮಂಡಳಿಯ ಇತಿಹಾಸದಲ್ಲಿ ಮತ್ತೊಂದು ಕಪ್ಪು ಚುಕ್ಕಿ ಎಂದು ಹೇಳಿದ್ದಾರೆ. ಇಸ್ರೇಲ್ ಗಾಝಾದಲ್ಲಿ  ಅಮಾನವೀಯ ಯೋಜನೆಗಳನ್ನು ಪೂರ್ಣಗೊಳಿಸಲು ಅಮೆರಿಕ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಫ್ರಾನ್ಸ್‌

ಫ್ರಾನ್ಸ್‌ನ ಯುಎನ್ ರಾಯಭಾರಿ ನಿಕೋಲಸ್ ಡಿ ರಿವಿಯೆರ್ ಅವರು ಗಾಝಾದಲ್ಲಿನ ವಿನಾಶಕಾರಿ ಪರಿಸ್ಥಿತಿಯನ್ನು ಗಮನಿಸಿದರೂ,  ಯುಎಸ್‌ ಕದನ ವಿರಾಮ ನಿರ್ಣಯವನ್ನು ಅಂಗೀಕರಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ನಿರ್ಣಯಕ್ಕೆ ಮತ ಹಾಕಿದ ಫ್ರಾನ್ಸ್, ಎಲ್ಲಾ ಬಂಧಿತರನ್ನು ಬಿಡುಗಡೆ ಮಾಡಲು ಮತ್ತು ಕದನ ವಿರಾಮವನ್ನು ತಕ್ಷಣ ಕಾರ್ಯಗತಗೊಳಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದೆ.

ಅಲ್ಜೀರಿಯಾ

ಅಲ್ಜೀರಿಯಾದ ರಾಯಭಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯುಎನ್‌ಎಸ್‌ಸಿ ಮತ್ತೊಮ್ಮೆ ವಿಫಲವಾಗಿದೆ. ಈ ಕ್ರಮವು ಒಟ್ಟಾರೆಯಾಗಿ ಮಧ್ಯಪ್ರಾಚ್ಯಕ್ಕೆ ಆಳವಾದ ಪರಿಣಾಮಗಳನ್ನು ಉಂಟುಮಾಡಬಹುದು. ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆಯನ್ನು ಕೊನೆಗೊಳಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣದ ಕದನ ವಿರಾಮಕ್ಕೆ ಕರೆ ನೀಡುವ ಮೂಲಕ ಪ್ರತಿಕ್ರಿಯಿಸಬೇಕು. ಅಂತಹ ಕರೆಗಳಿಗೆ ಅಡ್ಡಿಪಡಿಸುವವರೆಲ್ಲರೂ ತಮ್ಮ ನೀತಿಗಳು  ಪರಿಶೀಲಿಸಬೇಕು. ಏಕೆಂದರೆ ಇಂದಿನ ತಪ್ಪು ನಿರ್ಧಾರಗಳು ನಾಳೆ ಬೆಲೆ ತೆರವುಂತೆ ಮಾಡುತ್ತದೆ. ಆದ್ದರಿಂದ ನಿಮ್ಮನ್ನು ಕೇಳಿಕೊಳ್ಳಿ, ನಿಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಿ. ಇಂದು ನಿಮ್ಮ ನಿರ್ಧಾರಗಳು ಏನನ್ನು ಉಂಟುಮಾಡುತ್ತವೆ? ಇತಿಹಾಸವು ನಿಮ್ಮನ್ನು ಏನೆಂದು ಹೇಳುತ್ತದೆ ಎಂದು ಅಮೆರಿಕದ ನಿರ್ಧಾರವನ್ನು ಉಲ್ಲೇಖಿಸಿ ಅಲ್ಜೀರಿಯಾ ಹೇಳಿದೆ.

ಹಮಾಸ್‌

ಅಲ್ಜೀರಿಯಾದ ಕರಡು ನಿರ್ಣಯವನ್ನು ನಿರ್ಬಂಧಿಸುವ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ನಿರ್ಧಾರವು,   ಇಸ್ರೇಲ್‌ ಆಕ್ರಮಣದ ಮುಂದುವರಿಕೆಗೆ ಸಹಾಯವನ್ನು ಮಾಡುತ್ತದೆ. ಇದು ಪ್ಯಾಲೇಸ್ತೀನ್‌ ನಾಗರಿಕರನ್ನು  “ಕೊಲ್ಲುವ ಮತ್ತು ಸ್ಥಳಾಂತರಿಸುವ” ಗುರಿಯನ್ನು ಹೊಂದಿದೆ ಎಂದು ಹಮಾಸ್‌ ಹೇಳಿದೆ.

ಪ್ಯಾಲೆಸ್ತೀನ್‌

ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಕಚೇರಿಯು ಯುಎಸ್ ವೀಟೋ ಅಂತರಾಷ್ಟ್ರೀಯ ಸಮುದಾಯವನ್ನು ಧಿಕ್ಕರಿಸಿರುವ ಬೆಳವಣಿಗೆಯಾಗಿದೆ ಮತ್ತು ಇಸ್ರೇಲ್‌ಗೆ ಗಾಝಾದ ಜನರ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರೆಸಲು ಮತ್ತು ರಫಾಹ್ ಮೇಲಿನ ದಾಳಿಗೆ ಹಸಿರು ನಿಶಾನೆ ತೋರಿದಂತಾಗಿದೆ ಎಂದು ಹೇಳಿದೆ.

ಗಾಝಾದಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ವಿರುದ್ಧ ಇಸ್ರೇಲ್‌ನ “ಅನಾಗರಿಕ ದಾಳಿ” ಗಳಿಗೆ “ಬೆಂಬಲಿಸುವ ಮತ್ತು ರಕ್ಷಣೆ ನೀಡುವ” ಜವಾಬ್ದಾರಿಯನ್ನು US ಆಡಳಿತ ಹೊಂದಿದೆ. ಈ ನೀತಿಯು ನರಮೇಧ ಮತ್ತು ಜನಾಂಗೀಯ ಹತ್ಯಾಕಾಂಡದ ಅಪರಾಧಗಳಲ್ಲಿ ಇಸ್ರೇಲ್‌ ಪಡೆಗಳು ಮಾಡುತ್ತಿರುವ ಯುದ್ಧ ಅಪರಾಧಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ ಪಾಲುದಾರನನ್ನಾಗಿ ಮಾಡುತ್ತದೆ ಎಂದು ಹೇಳಿದೆ.

ಕತಾರ್‌

ಕತಾರ್‌ನ ಯುಎನ್ ರಾಯಭಾರಿ ಅಲ್ಯಾ ಅಹ್ಮದ್ ಸೈಫ್ ಅಲ್ ಥಾನಿ ಅವರು ಅಲ್ಜೀರಿಯಾ-ಕರಡು ನಿರ್ಣಯವನ್ನು ಅಂಗೀಕರಿಸುವಲ್ಲಿ ಯುಎನ್‌ಎಸ್‌ಸಿ ವಿಫಲವಾದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಗಾಝಾದಲ್ಲಿ ಕದನ ವಿರಾಮಕ್ಕೆ ಪ್ರಯತ್ನಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಸೌದಿ ಅರೇಬಿಯಾ
ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯವು ಅಮೆರಿಕ ವೀಟೋದ ಅಧಿಕಾರ ಬಳಸಿ ನಿರ್ಣಯವನ್ನು ವಿರೋಧಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದೆ. ನಾರ್ವೆ ಕೂಡ ತಕ್ಷಣದ ಮಾನವೀಯ ಕದನ ವಿರಾಮದ ಕುರಿತು ನಿರ್ಣಯವನ್ನು ಅಂಗೀಕರಿಸಲು ಯುಎನ್‌ ಕೌನ್ಸಿಲ್‌ಗೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದೆ ಮತ್ತು  ಗಾಜಾದಲ್ಲಿ ಭಯಾನಕತೆಯನ್ನು ಕೊನೆಗೊಳಿಸುವುದು ಅತ್ಯಗತ್ಯ ಎಂದು  ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಬ್ಲಾಕ್‌ಮೇಲ್‌ ಮಾಡಿದ ಕೇಂದ್ರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...