Homeಅಂತರಾಷ್ಟ್ರೀಯಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು...

ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಯನ್ನು ನಿಲ್ಲಿಸುವಂತೆ ಯುಎನ್ ಸೆಕ್ಯುರಿಟಿ ಕೌನ್ಸಿಲ್ (ಯುಎನ್‌ಎಸ್‌ಸಿ) ಮಂಡಿಸಿದ ಕರಡು ನಿರ್ಣಯವನ್ನು ಮತ್ತೊಮ್ಮೆ ವೀಟೋ ಅಧಿಕಾರವನ್ನು ಬಳಕೆ ಮಾಡುವ ಮೂಲಕ ಅಮೆರಿಕ ತಡೆದಿದ್ದು, ಇದಕ್ಕೆ ಮಿತ್ರರಾಷ್ಟ್ರಗಳು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಖಂಡನೆ ವ್ಯಕ್ತವಾಗಿದೆ.

ಗಾಝಾದಲ್ಲಿ ಕದನ ವಿರಾಮವನ್ನು ಒತ್ತಾಯಿಸುವ ಯುಎನ್‌ಎಸ್‌ಸಿ ಮಂಡಿಸಿದ ಮೂರನೇ ನಿರ್ಣಯವನ್ನು ಕೂಡ ಅಮೆರಿಕ ವಿಟೋ ಅಧಿಕಾರವನ್ನು ಬಳಸಿ ತಡೆದಿದೆ. ಇದು ಅಮೆರಿಕಾದ ಅಮಾನವೀಯ ಕೃತ್ಯ, ಇಸ್ರೇಲ್‌ ನಡೆಸುತ್ತಿರುವ ನರಮೇಧಕ್ಕೆ ಅಮೆರಿಕಾ ಪಾಲುದಾರವಾಗಿದೆ ಎಂದು ವಿಶ್ವದ ಬಹುತೇಖ ರಾಷ್ಟ್ರಗಳು ಖಂಡನೆಯನ್ನು ವ್ಯಕ್ತಪಡಿಸಿದೆ.

ಅಮೆರಿಕ ನಿನ್ನೆ ಪ್ಯಾಲೆಸ್ತೀನ್‌ ಎನ್‌ಕ್ಲೇವ್‌ನಿಂದ ಎಲ್ಲಾ ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ತಾತ್ಕಾಲಿಕ ಕದನ ವಿರಾಮವನ್ನು ಬೆಂಬಲಿಸುವ ನಿರ್ಣಯವನ್ನು ಬೆಂಬಲಿಸಿತ್ತು. ಇದರ ಬೆನ್ನಲ್ಲಿ ಅಮೆರಿಕ ಮತ್ತೆ ಉಲ್ಟಾ ಹೊಡೆದಿದೆ. ಗಾಝಾದಲ್ಲಿ 29,000ಕ್ಕೂ ಅಧಿಕ ಜನರ ಹತ್ಯೆಯ ಬೆನ್ನಲ್ಲಿ ಸಂಘರ್ಷವನ್ನು ಕೊನೆಗೊಳಿಸಲು ಜಗತ್ತಿನಾದ್ಯಂತದ ದೇಶಗಳು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದೆ. ಯುಎನ್‌ ‘ಕದನ ವಿರಾಮ’ದ ಕುರಿತ ನಿರ್ಣಯಕ್ಕೆ 15-ಸದಸ್ಯ ಮಂಡಳಿಯಲ್ಲಿನ ಮತವು 13-1 ಆಗಿದ್ದು, ಯುನೈಟೆಡ್ ಕಿಂಗ್‌ಡಮ್ ಮತಗಳಿಂದ ದೂರ ಉಳಿದಿತ್ತು. ಅಮೆರಿಕಾ ವೀಟೋ ಅಧಿಕಾರವನ್ನು ಬಳಸಿ ನಿರ್ಣಯಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಅಮೆರಿಕ ನಡೆಗೆ ಚೀನಾ ವಿರೋಧ:

ಯುಎಸ್‌ ಕದನ ವಿರಾಮವನ್ನು ಬೆಂಬಲಿಸದ ಹಿನ್ನೆಲೆ, ಚೀನಾದ ರಾಯಭಾರಿ ಜಾಂಗ್ ಜುನ್, ಯುಎಸ್‌ ಬಗ್ಗೆ ಬಲವಾದ ನಿರಾಶೆ ಮತ್ತು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಯುಎಸ್‌ನ ವೀಟೋ ತಪ್ಪು ಸಂದೇಶವನ್ನು ಕಳುಹಿಸುತ್ತದೆ, ಗಾಝಾದಲ್ಲಿನ ಪರಿಸ್ಥಿತಿಯನ್ನು ಹೆಚ್ಚು ಅಪಾಯಕಾರಿ ಸ್ಥಿತಿಗೆ ತಳ್ಳುತ್ತದೆ ಎಂದು ಜಾಂಗ್ ಹೇಳಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಆಕ್ಷೇಪಣೆಯು ಮುಂದುವರಿದ ಹತ್ಯೆಗೆ ಹಸಿರು ನಿಶಾನೆ ತೋರುವುದಕ್ಕಿಂತ ಭಿನ್ನವಾಗಿಲ್ಲ. ಗಾಝಾದಲ್ಲಿನ ಯುದ್ಧವನ್ನು ತಡೆಯುವ ಮೂಲಕ  ಮಾತ್ರ ಇಡೀ ಪ್ರದೇಶವನ್ನು ಆವರಿಸಿರುವ ನರಕದ ಬೆಂಕಿಯನ್ನು ಜಗತ್ತು ತಡೆಯಬಹುದು ಎಂದು ಚೀನಾ ಹೇಳಿದೆ.

ರಷ್ಯಾ 

ಗಾಝಾದಲ್ಲಿ ಕದನ ವಿರಾಮಕ್ಕೆ ಯುಎಸ್ ವೀಟೋ ಅಧಿಕಾರವನ್ನು ಬಳಕೆ ಮಾಡಿ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಕ್ಕೆ ರಷ್ಯಾದ ರಾಯಭಾರಿ ವಾಸಿಲಿ ನೆಬೆಂಜಿಯಾ ಅವರು ಯುಎಸ್ ವೀಟೋ ಅಧಿಕಾರ ಬಳಕೆ ಭದ್ರತಾ ಮಂಡಳಿಯ ಇತಿಹಾಸದಲ್ಲಿ ಮತ್ತೊಂದು ಕಪ್ಪು ಚುಕ್ಕಿ ಎಂದು ಹೇಳಿದ್ದಾರೆ. ಇಸ್ರೇಲ್ ಗಾಝಾದಲ್ಲಿ  ಅಮಾನವೀಯ ಯೋಜನೆಗಳನ್ನು ಪೂರ್ಣಗೊಳಿಸಲು ಅಮೆರಿಕ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಫ್ರಾನ್ಸ್‌

ಫ್ರಾನ್ಸ್‌ನ ಯುಎನ್ ರಾಯಭಾರಿ ನಿಕೋಲಸ್ ಡಿ ರಿವಿಯೆರ್ ಅವರು ಗಾಝಾದಲ್ಲಿನ ವಿನಾಶಕಾರಿ ಪರಿಸ್ಥಿತಿಯನ್ನು ಗಮನಿಸಿದರೂ,  ಯುಎಸ್‌ ಕದನ ವಿರಾಮ ನಿರ್ಣಯವನ್ನು ಅಂಗೀಕರಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ನಿರ್ಣಯಕ್ಕೆ ಮತ ಹಾಕಿದ ಫ್ರಾನ್ಸ್, ಎಲ್ಲಾ ಬಂಧಿತರನ್ನು ಬಿಡುಗಡೆ ಮಾಡಲು ಮತ್ತು ಕದನ ವಿರಾಮವನ್ನು ತಕ್ಷಣ ಕಾರ್ಯಗತಗೊಳಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದೆ.

ಅಲ್ಜೀರಿಯಾ

ಅಲ್ಜೀರಿಯಾದ ರಾಯಭಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯುಎನ್‌ಎಸ್‌ಸಿ ಮತ್ತೊಮ್ಮೆ ವಿಫಲವಾಗಿದೆ. ಈ ಕ್ರಮವು ಒಟ್ಟಾರೆಯಾಗಿ ಮಧ್ಯಪ್ರಾಚ್ಯಕ್ಕೆ ಆಳವಾದ ಪರಿಣಾಮಗಳನ್ನು ಉಂಟುಮಾಡಬಹುದು. ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆಯನ್ನು ಕೊನೆಗೊಳಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣದ ಕದನ ವಿರಾಮಕ್ಕೆ ಕರೆ ನೀಡುವ ಮೂಲಕ ಪ್ರತಿಕ್ರಿಯಿಸಬೇಕು. ಅಂತಹ ಕರೆಗಳಿಗೆ ಅಡ್ಡಿಪಡಿಸುವವರೆಲ್ಲರೂ ತಮ್ಮ ನೀತಿಗಳು  ಪರಿಶೀಲಿಸಬೇಕು. ಏಕೆಂದರೆ ಇಂದಿನ ತಪ್ಪು ನಿರ್ಧಾರಗಳು ನಾಳೆ ಬೆಲೆ ತೆರವುಂತೆ ಮಾಡುತ್ತದೆ. ಆದ್ದರಿಂದ ನಿಮ್ಮನ್ನು ಕೇಳಿಕೊಳ್ಳಿ, ನಿಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಿ. ಇಂದು ನಿಮ್ಮ ನಿರ್ಧಾರಗಳು ಏನನ್ನು ಉಂಟುಮಾಡುತ್ತವೆ? ಇತಿಹಾಸವು ನಿಮ್ಮನ್ನು ಏನೆಂದು ಹೇಳುತ್ತದೆ ಎಂದು ಅಮೆರಿಕದ ನಿರ್ಧಾರವನ್ನು ಉಲ್ಲೇಖಿಸಿ ಅಲ್ಜೀರಿಯಾ ಹೇಳಿದೆ.

ಹಮಾಸ್‌

ಅಲ್ಜೀರಿಯಾದ ಕರಡು ನಿರ್ಣಯವನ್ನು ನಿರ್ಬಂಧಿಸುವ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ನಿರ್ಧಾರವು,   ಇಸ್ರೇಲ್‌ ಆಕ್ರಮಣದ ಮುಂದುವರಿಕೆಗೆ ಸಹಾಯವನ್ನು ಮಾಡುತ್ತದೆ. ಇದು ಪ್ಯಾಲೇಸ್ತೀನ್‌ ನಾಗರಿಕರನ್ನು  “ಕೊಲ್ಲುವ ಮತ್ತು ಸ್ಥಳಾಂತರಿಸುವ” ಗುರಿಯನ್ನು ಹೊಂದಿದೆ ಎಂದು ಹಮಾಸ್‌ ಹೇಳಿದೆ.

ಪ್ಯಾಲೆಸ್ತೀನ್‌

ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಕಚೇರಿಯು ಯುಎಸ್ ವೀಟೋ ಅಂತರಾಷ್ಟ್ರೀಯ ಸಮುದಾಯವನ್ನು ಧಿಕ್ಕರಿಸಿರುವ ಬೆಳವಣಿಗೆಯಾಗಿದೆ ಮತ್ತು ಇಸ್ರೇಲ್‌ಗೆ ಗಾಝಾದ ಜನರ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರೆಸಲು ಮತ್ತು ರಫಾಹ್ ಮೇಲಿನ ದಾಳಿಗೆ ಹಸಿರು ನಿಶಾನೆ ತೋರಿದಂತಾಗಿದೆ ಎಂದು ಹೇಳಿದೆ.

ಗಾಝಾದಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ವಿರುದ್ಧ ಇಸ್ರೇಲ್‌ನ “ಅನಾಗರಿಕ ದಾಳಿ” ಗಳಿಗೆ “ಬೆಂಬಲಿಸುವ ಮತ್ತು ರಕ್ಷಣೆ ನೀಡುವ” ಜವಾಬ್ದಾರಿಯನ್ನು US ಆಡಳಿತ ಹೊಂದಿದೆ. ಈ ನೀತಿಯು ನರಮೇಧ ಮತ್ತು ಜನಾಂಗೀಯ ಹತ್ಯಾಕಾಂಡದ ಅಪರಾಧಗಳಲ್ಲಿ ಇಸ್ರೇಲ್‌ ಪಡೆಗಳು ಮಾಡುತ್ತಿರುವ ಯುದ್ಧ ಅಪರಾಧಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ ಪಾಲುದಾರನನ್ನಾಗಿ ಮಾಡುತ್ತದೆ ಎಂದು ಹೇಳಿದೆ.

ಕತಾರ್‌

ಕತಾರ್‌ನ ಯುಎನ್ ರಾಯಭಾರಿ ಅಲ್ಯಾ ಅಹ್ಮದ್ ಸೈಫ್ ಅಲ್ ಥಾನಿ ಅವರು ಅಲ್ಜೀರಿಯಾ-ಕರಡು ನಿರ್ಣಯವನ್ನು ಅಂಗೀಕರಿಸುವಲ್ಲಿ ಯುಎನ್‌ಎಸ್‌ಸಿ ವಿಫಲವಾದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಗಾಝಾದಲ್ಲಿ ಕದನ ವಿರಾಮಕ್ಕೆ ಪ್ರಯತ್ನಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಸೌದಿ ಅರೇಬಿಯಾ
ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯವು ಅಮೆರಿಕ ವೀಟೋದ ಅಧಿಕಾರ ಬಳಸಿ ನಿರ್ಣಯವನ್ನು ವಿರೋಧಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದೆ. ನಾರ್ವೆ ಕೂಡ ತಕ್ಷಣದ ಮಾನವೀಯ ಕದನ ವಿರಾಮದ ಕುರಿತು ನಿರ್ಣಯವನ್ನು ಅಂಗೀಕರಿಸಲು ಯುಎನ್‌ ಕೌನ್ಸಿಲ್‌ಗೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದೆ ಮತ್ತು  ಗಾಜಾದಲ್ಲಿ ಭಯಾನಕತೆಯನ್ನು ಕೊನೆಗೊಳಿಸುವುದು ಅತ್ಯಗತ್ಯ ಎಂದು  ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಬ್ಲಾಕ್‌ಮೇಲ್‌ ಮಾಡಿದ ಕೇಂದ್ರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...