Homeಮುಖಪುಟವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

ವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

- Advertisement -
- Advertisement -

ಇಂದು (ಡಿ.5) ವಿಶ್ವ ಮಣ್ಣು ದಿನ. ಮನುಷ್ಯದಿಯಾಗಿ ಪ್ರಾಣಿ, ಸಸ್ಯ ಸೇರಿ ಎಲ್ಲಾ ಜೀವಿಗಳ ಆಧಾರ ಮಣ್ಣು. ಈ ದಿನ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ. ಮಣ್ಣಿನ ಸವಕಳಿಯನ್ನು ತಪ್ಪಿಸುವ, ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವವನ್ನು ತಿಳಿಸುವ ದಿನ ಇದಾಗಿದೆ.

ಈ ಮಣ್ಣು ದಿನವನ್ನು ಔಪಚಾರಿಕವಾಗಿ ಅನುಮೋದಿಸಿದ ಥಾಯ್ಲೆಂಡ್‌ನ ರಾಜ, ಕಿಂಗ್ ಭೂಮಿಬೋಲ್ ಅದುಲ್ಯಾ ದೇಜ್ ಅವರ ಜನ್ಮ ದಿನದಿಂದು ವಿಶ್ವ ಮಣ್ಣು ದಿನ ಆಚರಿಸಲಾಗುತ್ತದೆ. 2002 ರಲ್ಲಿ, ಅಂತರರಾಷ್ಟ್ರೀಯ ಮಣ್ಣು ವಿಜ್ಞಾನಗಳ ಒಕ್ಕೂಟ (IUSS) ಜಾಗತಿಕವಾಗಿ ಈ ದಿನವನ್ನು ಆಚರಿಸುವಂತೆ ಪ್ರಸ್ತಾಪಿಸಿತು. ಮಣ್ಣಿನ ಸವಕಳಿ, ಅದರ ಪರಿಣಾಮಗಳು ಮತ್ತು ಅದನ್ನು ತಡೆಯುವುದು ಹೇಗೆ ಎಂಬುದರ ಕುರಿತು ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತು.

2013 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಡಿಸೆಂಬರ್ 5, 2014ರಂದು ಮೊದಲ ಅಧಿಕೃತವಾಗಿ ಅಂತರರಾಷ್ಟ್ರೀಯ ವಿಶ್ವ ಮಣ್ಣಿನ ದಿನ ಆಚರಿಸುವುದಾಗಿ ಘೋಷಿಸಿತು. ಪ್ರತಿ ವರ್ಷ ಒಂದೊಂದು ಥೀಮ್‌ನೊಂದಿಗೆ ಈ ದಿನ ಆಚರಿಸಲಾಗುತ್ತದೆ.

ಇದನ್ನೂ ಓದಿ: ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

2021 ರ ವಿಶ್ವ ಮಣ್ಣಿನ ದಿನದ ಥೀಮ್ “ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ” ಎಂಬುದು. ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಲವಣಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸುವ ಮೂಲಕ ಆರೋಗ್ಯಕರ ಪರಿಸರ ವ್ಯವಸ್ಥೆಗಳ ಪ್ರಾಮುಖ್ಯತೆಯ ಅರಿವನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ. ಮಣ್ಣು ಲವಣಯುಕ್ತಗೊಳ್ಳುವುದರಿಂದ ಕೃಷಿ ಇಳುವರಿ ಕಡಿಮೆಯಾಗುತ್ತದೆ. ಮಣ್ಣು ಜವಳುಗೊಂಡು ಆಮ್ಲ ಮತ್ತು ಕ್ಷಾರಮಯವಾಗಿ  ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ.

ವಿಶ್ವ ಮಣ್ಣಿನ ದಿನದ ಪ್ರಾಮುಖ್ಯತೆಯನ್ನು ವಿವರಿಸಲು, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಣ್ಣಿನ ಮಹತ್ವ ತಿಳಿಸುವ ಹಲವು ವಿಡಿಯೋಗಳನ್ನು ಹಂಚಿಕೊಂಡಿದೆ. ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು ಎಂಬುದನ್ನು ಒತ್ತಿ ತಿಳಿಸಿದೆ.

ಆರೋಗ್ಯಕರ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಣ್ಣಿನ ಸಂಪನ್ಮೂಲಗಳ ದೀರ್ಘಕಾಲ ನಿರ್ವಹಣೆ ಮಾಡುವುದರ ಬಗ್ಗೆ ತಿಳಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಮಣ್ಣಿನ ಸವಕಳಿ, ರಾಸಾಯನಿಕಗಳ ಬಳಕೆ, ಲವಣಯುಕ್ತಗೊಳ್ಳುವುದು, ಮಣ್ಣಿಗೆ ಪ್ಲಾಸ್ಟಿಕ್ ಸೇರುವುದು ಸೇರಿದಂತೆ ಹಲವು ಸಮಸ್ಯೆಗಳತ್ತ ಎಲ್ಲರ ಗಮನ ಸೆಳೆಯುವ ಗುರಿಯನ್ನು ಈ ದಿನ ಹೊಂದಿದೆ.

Image


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...