Homeಮುಖಪುಟವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

ವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

- Advertisement -
- Advertisement -

ಇಂದು (ಡಿ.5) ವಿಶ್ವ ಮಣ್ಣು ದಿನ. ಮನುಷ್ಯದಿಯಾಗಿ ಪ್ರಾಣಿ, ಸಸ್ಯ ಸೇರಿ ಎಲ್ಲಾ ಜೀವಿಗಳ ಆಧಾರ ಮಣ್ಣು. ಈ ದಿನ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ. ಮಣ್ಣಿನ ಸವಕಳಿಯನ್ನು ತಪ್ಪಿಸುವ, ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವವನ್ನು ತಿಳಿಸುವ ದಿನ ಇದಾಗಿದೆ.

ಈ ಮಣ್ಣು ದಿನವನ್ನು ಔಪಚಾರಿಕವಾಗಿ ಅನುಮೋದಿಸಿದ ಥಾಯ್ಲೆಂಡ್‌ನ ರಾಜ, ಕಿಂಗ್ ಭೂಮಿಬೋಲ್ ಅದುಲ್ಯಾ ದೇಜ್ ಅವರ ಜನ್ಮ ದಿನದಿಂದು ವಿಶ್ವ ಮಣ್ಣು ದಿನ ಆಚರಿಸಲಾಗುತ್ತದೆ. 2002 ರಲ್ಲಿ, ಅಂತರರಾಷ್ಟ್ರೀಯ ಮಣ್ಣು ವಿಜ್ಞಾನಗಳ ಒಕ್ಕೂಟ (IUSS) ಜಾಗತಿಕವಾಗಿ ಈ ದಿನವನ್ನು ಆಚರಿಸುವಂತೆ ಪ್ರಸ್ತಾಪಿಸಿತು. ಮಣ್ಣಿನ ಸವಕಳಿ, ಅದರ ಪರಿಣಾಮಗಳು ಮತ್ತು ಅದನ್ನು ತಡೆಯುವುದು ಹೇಗೆ ಎಂಬುದರ ಕುರಿತು ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತು.

2013 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಡಿಸೆಂಬರ್ 5, 2014ರಂದು ಮೊದಲ ಅಧಿಕೃತವಾಗಿ ಅಂತರರಾಷ್ಟ್ರೀಯ ವಿಶ್ವ ಮಣ್ಣಿನ ದಿನ ಆಚರಿಸುವುದಾಗಿ ಘೋಷಿಸಿತು. ಪ್ರತಿ ವರ್ಷ ಒಂದೊಂದು ಥೀಮ್‌ನೊಂದಿಗೆ ಈ ದಿನ ಆಚರಿಸಲಾಗುತ್ತದೆ.

ಇದನ್ನೂ ಓದಿ: ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

2021 ರ ವಿಶ್ವ ಮಣ್ಣಿನ ದಿನದ ಥೀಮ್ “ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ” ಎಂಬುದು. ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಲವಣಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸುವ ಮೂಲಕ ಆರೋಗ್ಯಕರ ಪರಿಸರ ವ್ಯವಸ್ಥೆಗಳ ಪ್ರಾಮುಖ್ಯತೆಯ ಅರಿವನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ. ಮಣ್ಣು ಲವಣಯುಕ್ತಗೊಳ್ಳುವುದರಿಂದ ಕೃಷಿ ಇಳುವರಿ ಕಡಿಮೆಯಾಗುತ್ತದೆ. ಮಣ್ಣು ಜವಳುಗೊಂಡು ಆಮ್ಲ ಮತ್ತು ಕ್ಷಾರಮಯವಾಗಿ  ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ.

ವಿಶ್ವ ಮಣ್ಣಿನ ದಿನದ ಪ್ರಾಮುಖ್ಯತೆಯನ್ನು ವಿವರಿಸಲು, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಣ್ಣಿನ ಮಹತ್ವ ತಿಳಿಸುವ ಹಲವು ವಿಡಿಯೋಗಳನ್ನು ಹಂಚಿಕೊಂಡಿದೆ. ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು ಎಂಬುದನ್ನು ಒತ್ತಿ ತಿಳಿಸಿದೆ.

ಆರೋಗ್ಯಕರ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಣ್ಣಿನ ಸಂಪನ್ಮೂಲಗಳ ದೀರ್ಘಕಾಲ ನಿರ್ವಹಣೆ ಮಾಡುವುದರ ಬಗ್ಗೆ ತಿಳಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಮಣ್ಣಿನ ಸವಕಳಿ, ರಾಸಾಯನಿಕಗಳ ಬಳಕೆ, ಲವಣಯುಕ್ತಗೊಳ್ಳುವುದು, ಮಣ್ಣಿಗೆ ಪ್ಲಾಸ್ಟಿಕ್ ಸೇರುವುದು ಸೇರಿದಂತೆ ಹಲವು ಸಮಸ್ಯೆಗಳತ್ತ ಎಲ್ಲರ ಗಮನ ಸೆಳೆಯುವ ಗುರಿಯನ್ನು ಈ ದಿನ ಹೊಂದಿದೆ.

Image


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...