Homeಮುಖಪುಟವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

ವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

- Advertisement -
- Advertisement -

ಇಂದು (ಡಿ.5) ವಿಶ್ವ ಮಣ್ಣು ದಿನ. ಮನುಷ್ಯದಿಯಾಗಿ ಪ್ರಾಣಿ, ಸಸ್ಯ ಸೇರಿ ಎಲ್ಲಾ ಜೀವಿಗಳ ಆಧಾರ ಮಣ್ಣು. ಈ ದಿನ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ. ಮಣ್ಣಿನ ಸವಕಳಿಯನ್ನು ತಪ್ಪಿಸುವ, ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವವನ್ನು ತಿಳಿಸುವ ದಿನ ಇದಾಗಿದೆ.

ಈ ಮಣ್ಣು ದಿನವನ್ನು ಔಪಚಾರಿಕವಾಗಿ ಅನುಮೋದಿಸಿದ ಥಾಯ್ಲೆಂಡ್‌ನ ರಾಜ, ಕಿಂಗ್ ಭೂಮಿಬೋಲ್ ಅದುಲ್ಯಾ ದೇಜ್ ಅವರ ಜನ್ಮ ದಿನದಿಂದು ವಿಶ್ವ ಮಣ್ಣು ದಿನ ಆಚರಿಸಲಾಗುತ್ತದೆ. 2002 ರಲ್ಲಿ, ಅಂತರರಾಷ್ಟ್ರೀಯ ಮಣ್ಣು ವಿಜ್ಞಾನಗಳ ಒಕ್ಕೂಟ (IUSS) ಜಾಗತಿಕವಾಗಿ ಈ ದಿನವನ್ನು ಆಚರಿಸುವಂತೆ ಪ್ರಸ್ತಾಪಿಸಿತು. ಮಣ್ಣಿನ ಸವಕಳಿ, ಅದರ ಪರಿಣಾಮಗಳು ಮತ್ತು ಅದನ್ನು ತಡೆಯುವುದು ಹೇಗೆ ಎಂಬುದರ ಕುರಿತು ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತು.

2013 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಡಿಸೆಂಬರ್ 5, 2014ರಂದು ಮೊದಲ ಅಧಿಕೃತವಾಗಿ ಅಂತರರಾಷ್ಟ್ರೀಯ ವಿಶ್ವ ಮಣ್ಣಿನ ದಿನ ಆಚರಿಸುವುದಾಗಿ ಘೋಷಿಸಿತು. ಪ್ರತಿ ವರ್ಷ ಒಂದೊಂದು ಥೀಮ್‌ನೊಂದಿಗೆ ಈ ದಿನ ಆಚರಿಸಲಾಗುತ್ತದೆ.

ಇದನ್ನೂ ಓದಿ: ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

2021 ರ ವಿಶ್ವ ಮಣ್ಣಿನ ದಿನದ ಥೀಮ್ “ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ” ಎಂಬುದು. ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಲವಣಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸುವ ಮೂಲಕ ಆರೋಗ್ಯಕರ ಪರಿಸರ ವ್ಯವಸ್ಥೆಗಳ ಪ್ರಾಮುಖ್ಯತೆಯ ಅರಿವನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ. ಮಣ್ಣು ಲವಣಯುಕ್ತಗೊಳ್ಳುವುದರಿಂದ ಕೃಷಿ ಇಳುವರಿ ಕಡಿಮೆಯಾಗುತ್ತದೆ. ಮಣ್ಣು ಜವಳುಗೊಂಡು ಆಮ್ಲ ಮತ್ತು ಕ್ಷಾರಮಯವಾಗಿ  ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ.

ವಿಶ್ವ ಮಣ್ಣಿನ ದಿನದ ಪ್ರಾಮುಖ್ಯತೆಯನ್ನು ವಿವರಿಸಲು, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಣ್ಣಿನ ಮಹತ್ವ ತಿಳಿಸುವ ಹಲವು ವಿಡಿಯೋಗಳನ್ನು ಹಂಚಿಕೊಂಡಿದೆ. ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು ಎಂಬುದನ್ನು ಒತ್ತಿ ತಿಳಿಸಿದೆ.

ಆರೋಗ್ಯಕರ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಣ್ಣಿನ ಸಂಪನ್ಮೂಲಗಳ ದೀರ್ಘಕಾಲ ನಿರ್ವಹಣೆ ಮಾಡುವುದರ ಬಗ್ಗೆ ತಿಳಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಮಣ್ಣಿನ ಸವಕಳಿ, ರಾಸಾಯನಿಕಗಳ ಬಳಕೆ, ಲವಣಯುಕ್ತಗೊಳ್ಳುವುದು, ಮಣ್ಣಿಗೆ ಪ್ಲಾಸ್ಟಿಕ್ ಸೇರುವುದು ಸೇರಿದಂತೆ ಹಲವು ಸಮಸ್ಯೆಗಳತ್ತ ಎಲ್ಲರ ಗಮನ ಸೆಳೆಯುವ ಗುರಿಯನ್ನು ಈ ದಿನ ಹೊಂದಿದೆ.

Image


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...