Homeಮುಖಪುಟಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಕರ್ನಾಟಕದಲ್ಲಿ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ.

- Advertisement -
- Advertisement -

ಪ್ರತಿ ವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ 10, 2003 ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು 2014 ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು.

ಆತ್ಮಹತ್ಯೆ ಪ್ರಕರಣಗಳು ಪ್ರತಿವರ್ಷ ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಜೊತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ ಒಂದಾ, ಎರಡಾ… ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಹಾಗಾದರೇ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವೇ..? ಖಂಡಿತ ಇಲ್ಲ. ಮನುಷ್ಯ ಹುಟ್ಟಲೂ ಸಹ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಾರದು ಅಷ್ಟೇ. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆ, ನಾಳೆ ಕುಳಿತು ಯೋಚಿಸಿದರೇ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು.

ಇತ್ತಿಚೆಗೆ ಭಾರಿ ಸದ್ದು ಮಾಡಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಲ್ಲವೋ ಎಂಬುದರ ಕುರಿತು ದೊಡ್ಡ ಚರ್ಚೆಯೆಬ್ಬಿಸಿದೆ. ಆತ ತಾನು ಖಿನ್ನತೆಯಿಂದ ಬಳಲುತ್ತಿದೆ ಎಂದು ಆತನೇ ಹೇಳಿದರೂ ಕೂಡ ಪ್ರಕರಣ ಬೇರೆಡೆಗೆ ಹಾದಿ ತಪ್ಪುತ್ತಿದೆ. ಇಲ್ಲಿ ನಾವು ಪ್ರಾಮುಖ್ಯತೆ ನೀಡಬೇಕಾಗಿದದ್ದು, ಮಾನಸಿಕ ಖಿನ್ನತೆ ಜನರ ಜೀವವನ್ನು ಹೇಗೆ ಸಾವಿನೆಡೆಗೆ ತಳ್ಳುತ್ತದೆ ಎಂಬ ವಿಚಾರದ ಬಗ್ಗೆ. ನಾವು ಈ ಪ್ರಕರಣದಿಂದ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬಹುದಾಗಿತ್ತು. ಮಾನಸಿಕ ಖಿನ್ನತೆಗೆ ಬಡವ, ಶ್ರೀಮಂತ ಎಂಬ ಭೇದವಿಲ್ಲ ಎಂಬುದನ್ನು ಅರಿಯಬೇಕು. ಯಾವುದೇ ಜಾತಿ, ವಯಸ್ಸು, ವರ್ಗ, ವರ್ಣಗಳ ಭೇದವಿಲ್ಲದೆ ಮುಂದುವರಿದ ಹಾಗೆ ಜಗತ್ತೇ ಎದುರಿಸುತ್ತಿರುವ ಅತೀ ಅಪಾಯಕಾರಿ ಪಿಡುಗು ಈ ಆತ್ಮಹತ್ಯೆ.

ಕೊವೀಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿಗೆ ಕಾರಣ ತಿಳಿಯಬೇಕಾದರೆ ಬಾಲಿವುಡ್ ಎಂಬ ಚಕ್ರವ್ಯೂಹ ಅರಿಯಿರಿ..

ಕೊರೊನಾದ ಭಾವನಾತ್ಮಕ ಪರಿಣಾಮವನ್ನು ತಿಳಿಯಲು ಮಾನಸಿಕ ಆರೋಗ್ಯ ಮತ್ತು ವರ್ತನೆಯ ವಿಜ್ಞಾನ ಇಲಾಖೆ, ಮ್ಯಾಕ್ಸ್ ಹೆಲ್ತ್‌ಕೇರ್ (ನವದೆಹಲಿ) ನಡೆಸಿದ ವೆಬ್ ಆಧಾರಿತ ಅಧ್ಯಯನದ ಪ್ರಕಾರ, ಭಾರತದಾದ್ಯಂತ ಒಟ್ಟು 1,069 ಪ್ರತಿಕ್ರಿಯೆಗಳಲ್ಲಿ 25 ಪ್ರತಿಶತದಷ್ಟು ಜನರಲ್ಲಿ ಸಾವು ಮತ್ತು ಆತ್ಮಹತ್ಯೆಯ ಕಲ್ಪನೆ ಇದ್ದರೆ, ಇನ್ನು ಶೇಕಡಾ 10 ರಷ್ಟು ಜನರಿಗೆ ಆಗ್ಗಾಗ್ಗೆ ಆತ್ಮಹತ್ಯೆ ಬಗ್ಗೆ ಆಲೋಚನೆ ಬರುತ್ತದೆ ಎಂದು ತಿಳಿದುಬಂದಿದೆ.

ದೇಶದಲ್ಲಿ 2015ರಿಂದ 2019ರ 5 ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ 1.33 ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. 2019ರಲ್ಲಿ ದೇಶದಲ್ಲಿ 1.36 ಲಕ್ಷ ಆತ್ಮಹತ್ಯೆ ಸಂಭವಿಸಿವೆ. ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ.

ಇನ್ನು ರಾಜ್ಯದಲ್ಲಿ ನೋಡುವುದಾದರೇ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ. ಅನಾರೋಗ್ಯ ಜನರ ಆತ್ಮಹತ್ಯೆಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ.

PC: Rastriya Khabars

ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್

ಆತ್ಮಹತ್ಯೆ ತಡೆಗಟ್ಟುವಲ್ಲಿ ನಮ್ಮ ಪಾತ್ರವೇನು..?

  • ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು.
  • ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು.
  • ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು
  • ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು
  • ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡುವುದು. ಚಿಕಿತ್ಸೆ ಪಡೆಯಲು ಅವರನ್ನು ಓಲೈಸುವುದು.
  • ಜೀವನದಲ್ಲಿ ಗೆಲ್ಲುವುದೇ ಮುಖ್ಯವಲ್ಲ ಎಂಬುದನ್ನು ಅರ್ಥ ಮಾಡಿಸಿದರೇ ಆತ್ಮಹತ್ಯೆಯೆಂಬ ಯೋಚನೆಯಿಂದ ಮುಕ್ಕಾಲು ಭಾಗ ಗೆದ್ದಂತೆಯೇ.
  • ಜೀವದ ಮಹತ್ವವನ್ನು ಅರ್ಥ ಮಾಡಿಸುವುದು.
  • ತನ್ನ ಕುಟುಂಬ, ಸ್ನೇಹ ಬಳಗದ ಜೊತೆ ಆದಷ್ಟು ಸಂಪರ್ಕದಲ್ಲಿರುವಂತೆ ಮಾಡುವುದು
  • ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಪರಿಚಯಿಸುವುದು. ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ.
  • ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು.

ಮನುಷ್ಯ ತನ್ನ ಜೀವಿತಾವಧಿಯಲ್ಲಿ ಕನಿಷ್ಠ 5 ಬಾರಿಯಾದರೂ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಾನೆ ಎಂದು ಸಂಶೋಧನೆಯೊಂದು ತಿಳಿಸುತ್ತದೆ. ಇಂದಿನ ಯುಗದಲ್ಲಿ ಮನುಷ್ಯ ಸಂಬಂಧಗಳಿಂದ ಕೊಂಡಿ ಕಳಚಿಕೊಂಡು ಓಡುತ್ತಿರುವವರಿಗೆ ಈ ದಿನದ ಅಗತ್ಯತೆಯ ಅರಿವಾಗಬೇಕಿದೆ.

ತನ್ನ ಹುಟ್ಟು ತನ್ನ ಆಯ್ಕೆ ಆಗದಿದ್ದಾಗ ಸಾವನ್ನು ತನ್ನಿಷ್ಟದಂತೆ ಆಯ್ಕೆ ಮಾಡುವುದು ಅಪರಾಧವೂ, ಪ್ರಕೃತಿಗೆ ವಿರೋದ್ಧವೂ ಹೌದು. ಹೀಗಾಗಿಯೇ ಆತ್ಮಹತ್ಯೆಯನ್ನು ಅಪರಾಧ ಎಂದು ಪರಿಗಣಿಸಲಾಗಿದೆ. ಆತ್ಮಹತ್ಯೆಗೆ ಮುಂದಾಗುವ ವ್ಯಕ್ತಿ ಯಾವುದಾದರೂ ರೂಪದಲ್ಲಿ ಸೂಚನೆ ನೀಡಿಯೇ ಇರುತ್ತಾನೆ. ಅದನ್ನು ಗಮನಿಸುವ ತಾಳ್ಮೆ, ಸೂಕ್ಷ ಮನಸ್ಸು, ತಮ್ಮ ಸುತ್ತಲಿನವರ ಬಗ್ಗೆ ಕೊಂಚ ಕಾಳಜಿ ಇದ್ದರೂ ಸಾಕು ಅದೇಷ್ಟೋ ಆತ್ಮಹತ್ಯೆಗಳು ತಪ್ಪುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...